ಬೆಂಗಳೂರು: ಬೆಳೆಗಾರನೇ ಬೆಲೆ ನಿಗದಿಮಾಡುತ್ತಾನೆ. ಇತಿಹಾಸದಲ್ಲೆ ಮೊದಲಬಾರಿಗೆ ಇಂತಹ ಅವಕಾಶ ರೈತರಿಗೆ ಒದಗಿಸಲಾಗಿದೆ. ಈ ಹಿಂದೆ ಮಾರುಕಟ್ಟೆಯಲ್ಲಿ ದರ ನಿಗದಿ ಪಡಿಸಲಾಗುತ್ತಿತ್ತು. ಈಗ ಆನ್ಲೈನ್ ನಲ್ಲಿ ಮಾವು ಮಾರಾಟ ಆರಂಭಿಸಲಾಗಿದ್ದು, ದರವನ್ನ ಮಾವು ಬೆಳೆಗಾರ ನಿಗದಿಮಾಡುತ್ತಾನೆ. ಇಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಇಲ್ಲ ಎಂದು ತೋಟಗಾರಿಕೆ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.
ವಿಕಾಸ ಸೌಧದಲ್ಲಿ ಫ್ಲಿಪ್ ಕಾರ್ಟ್ ಸಹಯೋಗದಲ್ಲಿ ಆನ್ಲೈನ್ ಮೂಲಕ ಮಾವು ಮಾರಾಟಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು‌.

ಆನ್ಲೈನ್ ಮೂಲಕ ಮಾವು ಮಾರಾಟ ಆರಂಭಿಸಿದ್ದೇವೆ. ಇದು ಪ್ರಾಯೋಗಿಕ. ಇದರಲ್ಲಿ ಇರುವ ನ್ಯೂನ್ಯತೆ ಸರಿಪಡಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತೋತ್ಪನ್ನವನ್ನ ಆನ್ಲೈನ್ ಮೂಲಕ ಮಾರಾಟ ಮಾಡುವ ಪ್ರಯತ್ನ ಮಾಡಲಾಗುವುದು. ಈಗ ಮಾವು ಮಾರಾಟ ಆರಂಭವಾಗಿದೆ. ಫ್ಲಿಪ್ ಕಾರ್ಟ್ ನಲ್ಲಿ ಗ್ರಾಹಕರು ಮಾವು ಖರೀದಿ ಮಾಡಬಹುದು. ಆದರೆ ದರ ನಿಗದಿ ಮಾಡುವ ಹಕ್ಕು ಮಾವು ಬೆಳೆಗಾರನದ್ದೇ ಆಗಿದೆ‌. ಮದ್ಯವರ್ತಿಗಳಿಗೆ ಅವಕಾಶ ಇಲ್ಲ. ಇಲ್ಲಿ ಬೆಳೆಗಾರ ನಿಗದಿ ಮಾಡಿದ್ದೇ ದರ ಎಂದರು.

ಎಫ್ಪಿಓ ನಲ್ಲಿ ಬೆಳೆಗಾರರ ಹೆಸರು
ಫಾರ್ಮರ್ ಪ್ರೊಡ್ಯುಸ್ ಆರ್ಗನೈಸೇಶನ್ (FPO) ನಲ್ಲಿ ಮಾವು ಬೆಳೆಗಾರರು ಹೆಸರು ನೊಂದಾಯಿಸಿಕೊಳ್ಳಬೇಕು. ನೊಂದಾಯಿತ ರೈತರ ಹೆಸರನ್ನ ಫ್ಲಿಪ್ ಕಾರ್ಟ್ ನವರು ಪಡೆದುಕೊಳ್ಳುತ್ತಾರೆ. ಗ್ರಾಹಕರು ಆನ್ಲೈನ್ ನಲ್ಲಿ ಆರ್ಡರ್ ಮಾಡಿದಾಗ, ಸಂಬಂಧಿಸಿದ ತಳಿಯ ಮಾವನ್ನ ರೈತರಿಂದ ಪಡೆದು ಗ್ರಾಹಕರಿಗೆ ಫ್ಲಿಪ್ ಕಾರ್ಟ್ ನೀಡಲಿದೆ.
ಈಗ ಫ್ಲಿಪ್ ಕಾರ್ಟ್ ಮಾತ್ರ ಈ ಸೇವೆ ನೀಡಲು ಮುಂದಾಗಿದೆ‌. ಕೆಲ ದಿನಗಳ ಬಳಿಕ ಇತರ ಆನ್ಲೈನ್ ಮಾರಾಟ ಸಂಸ್ಥೆ ಮೂಲಕವೂ ಈ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.
ಅಲ್ಲದೆ ರೈತರಿಗೆ ಅನುಕೂಲ ಆಗುವಂತ ಮಾರುಕಟ್ಟೆ ನಿರ್ಮಿಸುವ ಬಗ್ಗೆಯೂ ಚಿಂತನೆ ಇದೆ. ಕೃಷಿ ಉತ್ಪನ್ನ ಹಾಳಾಗದಂತೆ ನೋಡಿಕೊಳ್ಳಲು ಕೋಲ್ಡ್ ಸ್ಟೋರೇಜ್ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಮಹಾಶಕ್ತಿ ಕೇಂದ್ರ ಮುಖಂಡರು ಬಿಜೆಪಿಗೆ ಶಕ್ತಿ: ಪ್ರತಾಪಗೌಡ

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದ ಬಳಿಕ ಮಾತನಾಡಿ, ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಗುರಿ ನಮ್ಮದಾಗಬೇಕು, ಎದುರಾಳಿ ಮುಖಂಡರ ಪ್ರಭಾವ ಇರುವ ಬೂತ್ ಗಳಲ್ಲಿ ಬಿಜೆಪಿ ಲೀಡ್ ಮಾಡಿ ತೋರಿಸಬೇಕು. ಈ ನಿಟ್ಟಿನಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಕೆಲಸ ನಿರ್ವಹಿಸಬೇಕೆಂದು ಹೇಳಿದರು.

ಹಾಲಸ್ವಾಮಿಜಿ ಲಿಂಗೈಕ್ಯ: ಸೋಂಕಿನ ಛಾಯೆ?

ಬಸವಾಪಟ್ಟಣದ ಹಾಲಸ್ವಾಮಿ ಗವಿಮಠ ಮತ್ತು ರಾಂಪುರದ ಹಾಲಸ್ವಾಮಿ ಮಠದ ಶ್ರೀ ವಿಶ್ವಾರಾಧ್ಯ ಹಾಲಸ್ವಾಮಿಗಳು ಕಾಲವಶರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು

ಮೊದಲನೇ ಹಂತದ ಚುನಾವಣೆ ಮಪತ್ರಗಳ ಸಲ್ಲಿಕೆ ಅವಧಿ ಮುಕ್ತಾಯ: ಗದಗ ಜಿಲ್ಲೆಯಲ್ಲಿ ಸಲ್ಲಿಕೆಯಾದ ಮತಪತ್ರಗಳ ವಿವರ

ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳ ಸ್ವೀಕರಿಸುವ ಅವಧಿ ಡಿ.11 ರಂದು ಮುಕ್ತಾಯವಾಗಿದ್ದು, ಒಟ್ಟು 801 ಸ್ಥಾನಗಳಿಗೆ 1212 ಮಹಿಳೆಯರು ಸೇರಿದಂತೆ ಒಟ್ಟಾರೆ 2802 ನಾಮಪತ್ರಗಳ ಸಲ್ಲಿಕೆಯಾಗಿವೆ.

ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಸನ್ಮಾನ.

ವರದಿ: ವಿಠಲ ಕೆಳೂತ್ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರಿನ ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಮಾಜಿ…