ಬೆಂಗಳೂರು: ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ. ನನಗೆ ಕೆಲಸ ಮಾಡೋದಷ್ಟೆ ಗೊತ್ತು, ನನಗೆ ಯಾವುದೇ ಭಯ ಇಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದರು.

ವಿಕಾಸ ಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವರು, ನಾನು ಶಾಸಕ ಸುರೇಶ್ ಗೌಡ ಅವರ ಸಿಡಿ ಬಿಡುಗಡೆ ಮಾಡುತ್ತೇನೆ, ಸಿಡಿ ಇದೆ ಎಂಬ ವಿಚಾರ ಹೇಳಿಲ್ಲ‌. ಸಿಡಿ ಮಾಡೋದು, ಮಾಡಿಸೋದು ನನ್ನ ಸ್ವಭಾವ ಅಲ್ಲ. ಯಾವತ್ತೂ ಅಂತ ಕೆಲಸ ಮಾಡೋದಿಲ್ಲ. ಹೊಟ್ಟೆ ಬಟ್ಟೆಗಾಗಿ ದೇಶಾಂತರ ಹೋದವನು ನಾನು. ಮಹಾರಾಷ್ಟ್ರದಲ್ಲೆ ಎಲ್ಲವನ್ನು ಎದುರಿಸಿಯೇ ಬದುಕು ಕಟ್ಟಿಕೊಂಡಿದ್ದೇನೆ. ಯಾವುದಕ್ಕೂ ಹೆದರುವ ಜಾಯಮಾನ ನನ್ನದಲ್ಲ. ಜಿಲ್ಲೆಯಲ್ಲಿ ಒಳ್ಳೆ ಕೆಲಸ ಮಾಡಿ, ಸರ್ಕಾರಕ್ಕೂ ಉತ್ತಮ ಹೆಸರು ತರುವುದು ನನ್ನ ಉದ್ದೇಶ ಅಷ್ಟೆ.

ನಾವೆಲ್ಲರೂ ಒಂದೇ ಪಕ್ಷದಲ್ಲಿ ಇದ್ದವರು. ಆದರೂ ನಾನು ಮಾತ್ರ ಈಗ ಅವರೆಲ್ಲರ ಸಹಮತದೊಂದಿಗೇ ಮಂಡ್ಯ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈಗಲೂ ಜಿಲ್ಲೆಯ ಎಲ್ಲ ಶಾಸಕರು ಪ್ರೀತಿಯಿಂದ ಮಾತನಾಡುತ್ತಾರೆ. ಆದರೆ ಮಾಧ್ಯಮದ ಎದುರು ಬಂದಾಗ ಮಾತ್ರ ನನ್ನ ಬಗ್ಗೆ ಕಿಡಿಕಾರುತ್ತಾರೆ‌. ಇದಕ್ಕೆ ಏನು ಕಾರಣವೊ ಗೊತ್ತಿಲ್ಲ. ನಾನು ಎಸ್ಕಾಟ್ ನೊಂದಿಗೆ ಓಡಾಡೋದನ್ನ ನೋಡಿ ಬೇಸರವಾಗಿದ್ದಾರೋ ಗೊತ್ತಿಲ್ಲ. ಮೈಶುಗರ್ ಸಕ್ಕರೆ ಕಾರ್ಖಾನೆಯನ್ನ ಖಾಸಗಿಗೆ ಕೊಡುವ ನಿರ್ಧಾರ ಕೈ ಬಿಡಲಾಗಿದೆ. ಈ ವಿಚಾರವನ್ನ ಸಿಎಂ ಜೊತೆ ಚರ್ಚಿಸಿದ್ದೇನೆ. ಆದರೆ ಮೈಶುಗರ್ ಸಕ್ಕರೆ ಕಾರ್ಖಾನೆ ವಿಚಾರ ಮಾತಾಡಲು ಶಾಸಕರನ್ನ ಸಿಎಂ ಬಳಿ ಕರೆದೊಯ್ಯಬೇಕು ಎಂಬ ಆಶಯ ಅವರಲ್ಲಿತ್ತು. ಸಮಸ್ಯೆ ಇತ್ಯರ್ಥ ಆದ ಮೇಲೆ ಶಾಸಕರನ್ನ ಸಿಎಂ ಬಳಿ ಯಾಕೆ ಕರೆದೊಯ್ಯಬೇಕು? ಎಂದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10,560 ಕ್ಕೆ ಏರಿಕೆಯಾದಂತಾಗಿದೆ.

ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ

ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…

ತಂತ್ರಜ್ಞಾನ ಯುಗದಲ್ಲೂ ರಂಗಭೂಮಿ ಕಲೆ ಜೀವಂತಿಕೆ ಗೊಳಸಂಗಿಯಲ್ಲಿ ರಂಗ ಕಲಾವಿದರಿಗೆ ಸನ್ಮಾನ,

ಉತ್ತರಪ್ರಭ ಸುದ್ದಿನಿಡಗುಂದಿ: ಆಧುನಿಕ ಯುಗದಲ್ಲಿ ರಂಗಭೂಮಿ ಕಲಾವಿದರು ಮೂಲೆ ಗುಂಪಾದರು ಎಂಬ ಮಾತೆಲ್ಲ ಶುದ್ಧ ಸುಳ್ಳು.…

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.