ಬೆಂಗಳೂರು: ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ. ನನಗೆ ಕೆಲಸ ಮಾಡೋದಷ್ಟೆ ಗೊತ್ತು, ನನಗೆ ಯಾವುದೇ ಭಯ ಇಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದರು.

ವಿಕಾಸ ಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವರು, ನಾನು ಶಾಸಕ ಸುರೇಶ್ ಗೌಡ ಅವರ ಸಿಡಿ ಬಿಡುಗಡೆ ಮಾಡುತ್ತೇನೆ, ಸಿಡಿ ಇದೆ ಎಂಬ ವಿಚಾರ ಹೇಳಿಲ್ಲ‌. ಸಿಡಿ ಮಾಡೋದು, ಮಾಡಿಸೋದು ನನ್ನ ಸ್ವಭಾವ ಅಲ್ಲ. ಯಾವತ್ತೂ ಅಂತ ಕೆಲಸ ಮಾಡೋದಿಲ್ಲ. ಹೊಟ್ಟೆ ಬಟ್ಟೆಗಾಗಿ ದೇಶಾಂತರ ಹೋದವನು ನಾನು. ಮಹಾರಾಷ್ಟ್ರದಲ್ಲೆ ಎಲ್ಲವನ್ನು ಎದುರಿಸಿಯೇ ಬದುಕು ಕಟ್ಟಿಕೊಂಡಿದ್ದೇನೆ. ಯಾವುದಕ್ಕೂ ಹೆದರುವ ಜಾಯಮಾನ ನನ್ನದಲ್ಲ. ಜಿಲ್ಲೆಯಲ್ಲಿ ಒಳ್ಳೆ ಕೆಲಸ ಮಾಡಿ, ಸರ್ಕಾರಕ್ಕೂ ಉತ್ತಮ ಹೆಸರು ತರುವುದು ನನ್ನ ಉದ್ದೇಶ ಅಷ್ಟೆ.

ನಾವೆಲ್ಲರೂ ಒಂದೇ ಪಕ್ಷದಲ್ಲಿ ಇದ್ದವರು. ಆದರೂ ನಾನು ಮಾತ್ರ ಈಗ ಅವರೆಲ್ಲರ ಸಹಮತದೊಂದಿಗೇ ಮಂಡ್ಯ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈಗಲೂ ಜಿಲ್ಲೆಯ ಎಲ್ಲ ಶಾಸಕರು ಪ್ರೀತಿಯಿಂದ ಮಾತನಾಡುತ್ತಾರೆ. ಆದರೆ ಮಾಧ್ಯಮದ ಎದುರು ಬಂದಾಗ ಮಾತ್ರ ನನ್ನ ಬಗ್ಗೆ ಕಿಡಿಕಾರುತ್ತಾರೆ‌. ಇದಕ್ಕೆ ಏನು ಕಾರಣವೊ ಗೊತ್ತಿಲ್ಲ. ನಾನು ಎಸ್ಕಾಟ್ ನೊಂದಿಗೆ ಓಡಾಡೋದನ್ನ ನೋಡಿ ಬೇಸರವಾಗಿದ್ದಾರೋ ಗೊತ್ತಿಲ್ಲ. ಮೈಶುಗರ್ ಸಕ್ಕರೆ ಕಾರ್ಖಾನೆಯನ್ನ ಖಾಸಗಿಗೆ ಕೊಡುವ ನಿರ್ಧಾರ ಕೈ ಬಿಡಲಾಗಿದೆ. ಈ ವಿಚಾರವನ್ನ ಸಿಎಂ ಜೊತೆ ಚರ್ಚಿಸಿದ್ದೇನೆ. ಆದರೆ ಮೈಶುಗರ್ ಸಕ್ಕರೆ ಕಾರ್ಖಾನೆ ವಿಚಾರ ಮಾತಾಡಲು ಶಾಸಕರನ್ನ ಸಿಎಂ ಬಳಿ ಕರೆದೊಯ್ಯಬೇಕು ಎಂಬ ಆಶಯ ಅವರಲ್ಲಿತ್ತು. ಸಮಸ್ಯೆ ಇತ್ಯರ್ಥ ಆದ ಮೇಲೆ ಶಾಸಕರನ್ನ ಸಿಎಂ ಬಳಿ ಯಾಕೆ ಕರೆದೊಯ್ಯಬೇಕು? ಎಂದರು.

Leave a Reply

Your email address will not be published. Required fields are marked *

You May Also Like

ಕೋವಿಡ್ ಬಾಧಿತ ಮಕ್ಕಳಿಗೆ ಕವಾಸಾಕಿ ಕಾಯಿಲೆ ಕಾಟ :ಏನಿದು ಕಾಯಿಲೆ? ಲಕ್ಷಣಗಳೇನು?

ಕೋವಿಡ್ ಬಾಧಿತ ಎಲ್ಲ ಮಕ್ಕಳಲ್ಲೂ ಇದು ಕಂಡು ಬಂದಿಲ್ಲವಾದರೂ, ಭಾರತ ಸೇರಿ ವಿಶ್ವಾದ್ಯಂತ ಹಲವಾರು ಪ್ರಕರಣಗಳು ವರದಿಯಾಗಿವೆ.ಕೋವಿಡ್ ಬಾಧಿತ ಮಕ್ಕಳಲ್ಲಿ, ಸೋಂಕಿಗೆ ಒಳಗಾದ 2-3 ವಾರಕ್ಕೆ

ಹಾವೇರಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಸವಣೂರಿಗೆ ಬಂದಿದ್ದ ಮೂವರು ಮೂವರಲ್ಲಿ ಇಬ್ಬರಿಗೆ ಕೊರೋನಾ ಸೊಂಕು ಧೃಡವಾದಂತಾಗಿದೆ. ಇನ್ನೊಂದು ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ

ನರೆಗಲ್ ಗಾರ್ಡನ್ ಕಥೆ: ಲಕ್ಷ ಖರ್ಚು ಮಾಡಿದರು ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ..?

ಗದಗ: ಜಿಲ್ಲೆಯ ನರೇಗಲ್ ಪಟ್ಟಣದ 17ನೇ ವಾರ್ಡ್‌ನಲ್ಲಿ ಶ್ರೀ ಅನ್ನದಾನೇಶ್ವರ ಕಾಲೆಜು ಪಕ್ಕದಲ್ಲಿ ನಾಲ್ಕು ವರ್ಷಗಳ…

ಹೆಚ್.ಕೆ.ವಿವೇಕಾನಂದ ಆತಂಕ

ಜಗತ್ತು ಬೆಳೆದಂತೆ ಸಂಬಂಧಗಳು ವ್ಯಾಪಾರೀಕರಣವಾಗಿ, ಮಾನವೀಯ ಮೌಲ್ಯಗಳೇ ಕುಸಿಯುತ್ತಿವೆ. ಹೀಗಾಗಿ ಸಮಾಜ ವಿನಾಶದೆಡೆಗೆ ಸಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಕೆ.ವಿವೇಕಾನಂದ ಹೇಳಿದರು.