ಬೆಂಗಳೂರು: ನಗರದಲ್ಲಿ ಉತ್ತಮ ಮಳೆ ಸುರಿದಿದ್ದು, ಇಂದು ಸುರಿದ ಮಳೆಗೆ ಉದ್ಯಾನ ನಗರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.

22 ವರ್ಷದ ಶಿಲ್ಪಾ ಸಾವನ್ನಪ್ಪಿದ ಮಹಿಳೆ. ಮಳೆಯ ಅಬ್ಬರಕ್ಕೆ ನಿರ್ಮಾಣ ಹಂತದ ಕಟ್ಟಡದ ಇಟ್ಟಿಗೆ, ಕಲ್ಲುಗಳು ಪಕ್ಕದ ಮನೆಯ ಮೇಲೆ ಬಿದ್ದಿವೆ. ಪರಿಣಾಮ ಮನೆಯಲ್ಲಿದ್ದ ಶಿಲ್ಪಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಧನುಷ್ ಎಂಬ ಬಾಲಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್, ಮಲ್ಲೇಶ್ವರಂ, ಯಶವಂತಪುರ, ನಾಗರಭಾವಿ, ಪೀಣ್ಯ, ಯಲಹಂಕ, ಹೆಬ್ಬಾಳ, ನಾಗವಾರ, ಕೆ.ಆರ್.ಪುರಂ, ಜಯನಗರ, ಜೆಪಿನಗರ, ಬಿಟಿಎಂ ಲೇಔಟ್ ಸೇರಿದಂತೆ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಯಶವಂತಪುರದಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಮೇಲೆ ಮರ ಬಿದ್ದಿದೆ. ಜೊತೆಗೆ ಮರದ ಕೊಂಬೆಗಳು ಬಿದ್ದು ಎರಡು ಕಾರ್ ಗಳು ಜಖಂ ಆಗಿವೆ. ಯಲಹಂಕದಲ್ಲಿ ಎರಡು ಹಾಗೂ ಆಡುಗೋಡಿ ಹಾಗೂ ಗೊರಗೊಂಟೆಪಾಳ್ಯದಲ್ಲಿ ಒಂದು ಮರ ಬಿದ್ದಿದೆ. ಬಿಟಿಎಂ ಲೇಔಟ್ ನಲ್ಲಿ ಟ್ರಾನ್ಸಫಾರಂ ಮೇಲೆ ಮರ ಬಿದ್ದು ಇಡೀ ಬಿಟಿಎಂ ಲೇಔಟ್ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆ

ಶಿಮ್ಲಾ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನ್ನು ವಿಸ್ತರಿಸಲಾಗಿದೆ.ಈ…