ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ.

ವಿಜಯಪುರ ಜಿಲ್ಲೆಯ ಇತಿಹಾಸದಲ್ಲಿಯೇ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ವಿಜಯಪುರದ ಜಿ. ಆಲಮೇಲ ಪಟ್ಟಣದಲ್ಲಿ ಇಂದು ಗರಿಷ್ಠ 45.3 ಡಿಗ್ರಿ ತಾಪಮಾನ ದಾಖಲಾಗಿದೆ. ಕಳೆದ ಮೂರು ದಿನಗಳಿಂದ 45 ಡಿಗ್ರಿ ಆಸುಪಾಸಿನಲ್ಲಿಯೇ ಉಷ್ಣಾಂಶ ಇದೆ. ಬಿಸಿಲ ಝಳದಿಂದ ವಿಜಯಪುರದ ಮಂದಿ ತತ್ತರಿಸಿ ಹೋಗಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಈ ತಾಪಮಾನ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆ ಸುರಿದಿದೆ. ಗುಡುಗು ಮಿಂಚು ಸಮೇತ ಬೆಂಗಳೂರಿನ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಆಗಿದೆ. ಮಳೆ ನಿಂತ ಮೇಲೆ ರೋಡ್ ಗಳು ಕೆರೆಗಳಾಗಿವೆ. ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಜಾಲಹಳ್ಳಿ, ಮತ್ತಿಕೆರೆ ಸೇರಿದಂತೆ ಹಲವಡೆ ಬಿರುಸಿನ ಮಳೆಯಾಗಿದೆ. ಭಾನುವಾರ ಲಾಕ್ ಡೌನ್ ಆಗಿದ್ದರಿಂದ ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಇಂದು ಕೆಲಸ ಮುಗಿಸಿ ಮನೆಯತ್ತ ಹೊರಟ ಜನರು ಮಳೆಯಲ್ಲಿ ಸಿಲುಕಿದರು.

Leave a Reply

Your email address will not be published. Required fields are marked *

You May Also Like

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿತರ ವಿಶೇಷ ಚಿಕಿತ್ಸೆಗಾಗಿ ಐಸಿಯು ವಾರ್ಡನಲ್ಲಿ…

ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಕಪ್ಪತಗುಡ್ಡಕ್ಕೆ ಬೆಂಕಿ: ಗಿಡ ಮರಗಳು ಸುಟ್ಟು ಭಸ್ಮ

ಉತ್ತರಪ್ರಭ ಸುದ್ದಿಗದಗ: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ…

ಅರೆಬೆತ್ತಲೆ ಪೇಂಟಿಂಗ್ ಮಾಡಿಸಿಕೊಂಡ ಮಾಡೆಲ್..!

ಪಟ್ಟಣಂತಿಟ್ಟು : ಶಬರಿ ಮಲೆ ದೇವಾಲಯ ಪ್ರವೇಶಿಸಿ ವಿವಾದ ಎಬ್ಬಿಸಿದ್ದ ರೆಹನಾ ಫಾತಿಮಾ ಮತ್ತೊಂದು ಅವಾಂತರ…

ರಾಜ್ಯದಲ್ಲಿ ಹೆಚ್ಚುತ್ತಿದೆ ಶೀತ ಜ್ವರ ಸೋಂಕಿತರ ಸಂಖ್ಯೆ: ಗದಗ,ಕೊಪ್ಪಳ,ಧಾರವಾಡ ಸೇರಿ ಹಲವು ಜಿಲ್ಲೆಯಲ್ಲೂ ಸಮೀಕ್ಷೆ..!

ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ…