ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ.

ವಿಜಯಪುರ ಜಿಲ್ಲೆಯ ಇತಿಹಾಸದಲ್ಲಿಯೇ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ವಿಜಯಪುರದ ಜಿ. ಆಲಮೇಲ ಪಟ್ಟಣದಲ್ಲಿ ಇಂದು ಗರಿಷ್ಠ 45.3 ಡಿಗ್ರಿ ತಾಪಮಾನ ದಾಖಲಾಗಿದೆ. ಕಳೆದ ಮೂರು ದಿನಗಳಿಂದ 45 ಡಿಗ್ರಿ ಆಸುಪಾಸಿನಲ್ಲಿಯೇ ಉಷ್ಣಾಂಶ ಇದೆ. ಬಿಸಿಲ ಝಳದಿಂದ ವಿಜಯಪುರದ ಮಂದಿ ತತ್ತರಿಸಿ ಹೋಗಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಈ ತಾಪಮಾನ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆ ಸುರಿದಿದೆ. ಗುಡುಗು ಮಿಂಚು ಸಮೇತ ಬೆಂಗಳೂರಿನ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಆಗಿದೆ. ಮಳೆ ನಿಂತ ಮೇಲೆ ರೋಡ್ ಗಳು ಕೆರೆಗಳಾಗಿವೆ. ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಜಾಲಹಳ್ಳಿ, ಮತ್ತಿಕೆರೆ ಸೇರಿದಂತೆ ಹಲವಡೆ ಬಿರುಸಿನ ಮಳೆಯಾಗಿದೆ. ಭಾನುವಾರ ಲಾಕ್ ಡೌನ್ ಆಗಿದ್ದರಿಂದ ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಇಂದು ಕೆಲಸ ಮುಗಿಸಿ ಮನೆಯತ್ತ ಹೊರಟ ಜನರು ಮಳೆಯಲ್ಲಿ ಸಿಲುಕಿದರು.

Leave a Reply

Your email address will not be published. Required fields are marked *

You May Also Like

ಲಡಾಕ್ ಗಡಿಯಲ್ಲಿ ಉದ್ವಿಗ್ನ ಸ್ಥಿತಿಗೆ ತಲುಪಿದ ಪರಿಸ್ಥಿತಿ!

ನವದೆಹಲಿ: ಲಡಾಕ್ ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.ಚೀನಾ ದೇಶದ ಸೇನೆಯೊಂದಿಗೆ ಗಡಿಯಲ್ಲಿ ಸೇನೆಯ ನಿಲುಗಡೆ ಮತ್ತು ಅಲ್ಲಿನ…

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…

ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಗಜೇಂದ್ರಗಡ ತಾಲೂಕು ಅಮರಗಟ್ಟಿ ತಾಂಡಾದಲ್ಲಿ ಆಚರಿಸಲಾಯಿತು

ಗದಗ: ಸೇವಾಲಾಲ್ ಮಹಾರಾಜರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಹಾಗೂ ತೇರನ್ನು ಎಳೆಯುವ ಮುಖಾಂತರ ವಿಶೇಷ ಸೇವಾಲಾಲ…

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.