ಇಸ್ಲಾಮಾಬಾದ್: ಕರಾಚಿ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಪಾಕ್ ರೂಪದರ್ಶಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಜಾರಾ ಆಬಿದಾ ಸಾವನ್ನಪ್ಪಿದ ಬಳಿಕವೂ ಟ್ರೋಲ್ ಆಗುತ್ತಿರುವ ರೂಪದರ್ಶಿ. ಧಾರ್ಮಿಕ ನಿಯಮಗಳನ್ನು ಜಾರಾ ಪಾಲನೆ ಮಾಡುತ್ತಿರಲಿಲ್ಲ ಎಂದು ಒಂದು ಪಂಗಡದ ಜನ ಟ್ರೋಲ್ ಮಾಡುತ್ತಿದ್ದಾರೆ. ಟ್ರೋಲ್ ಳಿಗೆ ಪರ-ವಿರೋಧಗಳು ವ್ಯಕ್ತವಾಗುತ್ತಲೇ ಜಾರಾ ಬಳಸುತ್ತಿದ್ದ ಸೋಶಿಯಲ್ ಮೀಡಿಯಾ ಖಾತೆಗಳನ್ನು ಡಿ ಆ್ಯಕ್ಟಿವ್ ಮಾಡಲಾಗಿದೆ.

ಪ್ಲೇನ್ ಕ್ರ್ಯಾಶ್ ನಲ್ಲಿ ಜಾರಾ ಬದುಕುಳಿದಿದ್ದಾರೆ ಎಂಬ ಸುದ್ದಿಗಳು ಪಾಕಿಸ್ತಾನದಲ್ಲಿ ವ್ಯಾಪಕವಾಗಿ ಹಬ್ಬಿದ್ದವು. ಎಲ್ಲ ಗಾಳಿಸುದ್ದಿಗಳಿಗೆ ತೆರೆ ಎಳೆದ ಕುಟುಂಬಸ್ಥರು, ಜಾರಾ ನಮ್ಮನ್ನು ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾಳೆ ಎಂದು ಖಚಿತಪಡಿಸಿದ್ದರು. ಸಾವಿನ ಸುದ್ದಿ ಖಚಿತವಾದ್ರೂ ಆಕೆ ಧರ್ಮ ವಿರೋಧಿ ಎಂಬ ಹೇಳಿಕೆಗಳನ್ನ ಬಳಸಿ ಟ್ರೋಲ್ ಮಾಡಿದ್ದಾರೆ.

28 ವರ್ಷದ ಜಾರಾ ಆಬಿದಾ ಮಾಡೆಲ್ ಲೋಕದಲ್ಲಿ ಗುರುತಿಸಿಕೊಳ್ಳುತ್ತಿದ್ದರು. ಹಲವು ವಿಶೇಷ ಕಾರ್ಯಕ್ರಮಗಳಲ್ಲಿ ಜಾರಾ ಭಾಗಿಯಾಗುವ ಮೂಲಕ ಮಾಡೆಲ್ ಲೋಕದಲ್ಲಿ ತಮ್ಮದೇ ಹೆಸರು ಮಾಡಿದ್ದರು. ಜನವರಿಯಲ್ಲಿ ಈ ವರ್ಷದ ಬೆಸ್ಟ್ ಫೀಮೇಲ್ ಮಾಡೆಲ್ ಅವಾರ್ಡ್ ಸಹ ಜಾರಾ ಪಡೆದುಕೊಂಡು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಸಿದ್ಧತೆಯಲ್ಲಿದ್ದರು. ಈ ವರ್ಷದ ಅಂತ್ಯದಲ್ಲಿ ಜಾರಾ ಸಿನಿಮಾ ಸೆಟ್ಟೇರಲಿತ್ತು. ಅಷ್ಟರಲ್ಲಿ ಕರಾಚಿ ವಿಮಾನ ದುರಂತದಲ್ಲಿ ಜಾರಾ ಸಾವು ಆಗಿದೆ.

Leave a Reply

Your email address will not be published. Required fields are marked *

You May Also Like

ನಟ ಧ್ರುವ ಸರ್ಜಾ ಸಿನಿಪ್ರಿಯರ ಕ್ಷಮೆ ಯಾಚಿಸಿದ್ದು ಯಾಕೆ ಗೊತ್ತಾ?

ನಟ ಧ್ರುವ ಸರ್ಜಾ ಟಾಲಿವುಡ್ ಸಿನಿಪ್ರೀಯರಿಗೆ ಕ್ಷಮೆಯಾಚಿಸಿದ್ದಾರೆ. ಅರೇ ಯಾಕೆ ಧ್ರುವಾ ಸರ್ಜಾ ಕ್ಷಮೆಯಾಚಿಸಿದ್ದಾರೆ ಎನ್ನುವ ಕುತೂಹಲು ಮೂಡುವುದು ಸಹಜ. ಇದೇ ಮೊದಲ ಬಾರಿ ತೆಲುಗು ಪ್ರೇಕ್ಷಕರಿಗೆ ಮುಂದೆ ಧ್ರುವ ಬರಲಿದ್ದಾರೆ. ಇಂತಹ ಸಂದರ್ಭದಲ್ಲಿ ಧ್ರುವ ಕ್ಷಮೆಯಾಚಿಸಿದ್ದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.

ಎ.ಪಿ.ಎಮ್.ಸಿ ಅಧ್ಯಕ್ಷರ ಆಯ್ಕೆ: ತಡೆಯಾಜ್ಞೆ ತೆರವು ಗೊಳಸಿ ಪ್ರಕರಣ ಮುಂದುವರೆಸಿದ ನ್ಯಾಯಾಲಯ

ಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೇ ನಡೆದಿತ್ತು. ಇದರಲ್ಲಿ ಬಿಜೆಪಿಯ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಈ ಬಗ್ಗೆ ಚುನಾವಣೆ ಪ್ರಕ್ರಿಯೇ ಪ್ರಶ್ನಿಸಿ ಹಿಂದಿನ ಅವಧಿಯ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಕಾಫಿಗೂ ಕೊರೊನಾ ಕಾಟ, ಬೆಳೆಗಾರರ ಸಂಕಷ್ಟ..!

ಲಾಕ್ ಡೌನ್ ಹಿನ್ನೆಲೆ ಕಾರ್ಮಿಕ ಕುಟುಂಬಗಳ ಪರಿಸ್ಥಿತಿ ಹೇಳತೀರದಾಗಿದೆ. ಕಾಫಿ ಉದ್ಯಮವನ್ನೆ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇನ್ನು ಕಾಫಿ ಉತ್ಪಾದನಾ ಉದ್ಯಮದ ಮೇಲೂ ಲಾಕ್ ಡೌನ್ ಪರಿಣಾಮ ಬೀರಿದೆ. ಇದರಿಂದ ಕಾಫಿ ಕೈಗಾರಿಕೆಗಳು ಸಂಕಷ್ಟ ೆದುರಿಸುವಂತಾಗಿದೆ.

ಹಾವೇರಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಸವಣೂರಿಗೆ ಬಂದಿದ್ದ ಮೂವರು ಮೂವರಲ್ಲಿ ಇಬ್ಬರಿಗೆ ಕೊರೋನಾ ಸೊಂಕು ಧೃಡವಾದಂತಾಗಿದೆ. ಇನ್ನೊಂದು ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ