ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆಯುತ್ತಿದೆ. ಪೊಲೀಸರೂ ಇದಕ್ಕೆ ಹೊರತಲ್ಲ. ಆನೇಕಲ್ ಮೂಲದ ಎಎಸ್ಐಗೆ ಕೊರೊನಾ ಸೋಂಕು ಹಬ್ಬಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಅಲ್ಲದೇ, ಹಾಸನ ಜಿಲ್ಲೆಯ ಹೊಳೇನರಸೀಪುರದಲ್ಲಿ ಪಿಎಸ್ಐ ಮತ್ತು ಮೂವರು ಕಾನ್ಸಸ್ಟೇಬಲ್ ಗಳಿಗೆ ವೈರಸ್ ಹಬ್ಬಿದೆ.

ಈ ಪೊಲೀಸರು ವಾಸವಿದ್ದ ಏರಿಯಾವನ್ನ ಸೀಲ್ಡೌನ್ ಮಾಡಲಾಗಿದೆ. ಈ ನಾಲ್ವರು ಪೊಲೀಸರನ್ನು ಮಹಾರಾಷ್ಟ್ರದ ಗಡಿಭಾಗ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಅಂತಾರಾಜ್ಯ ಗಡಿಯಲ್ಲಿ ನಿಯೋಜನೆ ಮಾಡಲಾಗಿತ್ತು. ಮೇ. 23ರಂದು ನಿಪ್ಪಾಣಿಯಿಂದ ಬಂದ ಇವರನ್ನು ತಕ್ಷಣವೇ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಈ ನಾಲ್ವರು ಪೊಲೀಸರಲ್ಲಿ ಒಬ್ಬರು ಪಿಡಬ್ಲ್ಯೂಡಿ ಕ್ವಾಟ್ರಸ್ ನಲ್ಲಿ, ಇನ್ನಿಬ್ಬರು ಪೊಲೀಸ್ ಕ್ವಾಟ್ರಸ್ ನಲ್ಲೂ, ಮತ್ತೊಬ್ಬರು ಹೌಸಿಂಗ್ ಬೋರ್ಡ್ ನಲ್ಲಿ ವಾಸವಿದ್ದರು. ಈ ಮೂರು ಏರಿಯಾಗಳನ್ನು ಈಗ ಸೀಲ್ಡೌ ನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸೇವೆಯಲ್ಲಿದ್ದ ಹಾಸನ ಮೂಲದ ಕಾನ್ಸಸ್ಟೇಬಲ್ ಗೆ ಕೊರೊನಾ ಕಾಣಿಸಿಕೊಂಡಿತ್ತು. ಈಗ ಆ ಪೊಲೀಸ್ ಜೊತೆಗೆ ಸಂಪರ್ಕದಲ್ಲಿದ್ದ ಮತ್ತಿಬ್ಬರಿಗೆ ಕೊರೊನಾ ಸೋಂಕು ಹಬ್ಬಿದೆ ಎನ್ನಲಾಗುತ್ತಿದೆ.

ದಕ್ಷಿಣಕನ್ನಡ, ಮಂಡ್ಯ, ದಾವಣಗೆರೆ, ಕಲಬುರಗಿಯಲ್ಲೂ ಕಾನ್ಸ್ ಸ್ಟೇಬಲ್ ಗಳಿಗೆ ಕೊರೊನಾ ವಕ್ಕರಿಸಿದೆ. ಬಾಗಲಕೋಟೆಯಲ್ಲಿ ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ಹಬ್ಬಿತ್ತು.

1 comment
Leave a Reply

Your email address will not be published. Required fields are marked *

You May Also Like

ಮಹಾಶಕ್ತಿ ಕೇಂದ್ರ ಅಧ್ಯಕ್ಷರಾಗಿ ನಾಗರಾಜ ಯಂಬಲದ ಆಯ್ಕೆ

ಮಸ್ಕಿ: ನಗರದ ಮಹಾಶಕ್ತಿ ಕೇಂದ್ರ ಅಧ್ಯಕ್ಷವನ್ನಾಗಿ ಆಯ್ಕೆಯಾದ ನಾಗರಾಜ ಯಂಬಲದ ಅವರಿಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿದರು.

ಸುಳ್ಳು ಹೇಳಿದ್ದು ಭಾರತವೋ ಅಥವಾ ಡೊನಾಲ್ಡ್ ಟ್ರಂಪೋ?

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತಾಡಿದ್ದೇನೆ. ಅವರು ಒಳ್ಳೆಯ ಮನಃಸ್ಥಿತಿಯಲ್ಲಿಲ್ಲ ಎಂದು ಅಮೆರಿಕ…

ವಿಧಾನಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯೊಂದಿಗೆ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಿದೆ.