ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.
ಇಲ್ಲಿಯ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ ಸೋಂಕು ಪತ್ತೆಯಾಗಿತ್ತು. ಅವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಐಸೋಲೇಷನ್ ವಾರ್ಡಿನಲ್ಲಿ ಇಂದು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಮೂರನೇ ಬಲಿಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಂಗಳವಾರದ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 95ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಎಪಿಎಂಸಿ ಚೆಕ್‌ಪೊಸ್ಟ್ ನಲ್ಲಿ ಹಣ ವಸೂಲಿ ದಂಧೆ?

ಎಪಿಎಂಸಿ ಚೆಕ್‌ಪೊಸ್ಟ್ನಲ್ಲಿ ವಾಹನ ತಪಾಸಣೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಸಂವಾದ ನಡೆಸಿದ ಶಾಸಕ ನಡಹಳ್ಳಿ..! ಅನುದಿನವೂ ಇಷ್ಟಪಟ್ಟು ಓದಿ ಭವಿಷ್ಯ ಕಟ್ಟಿಕೊಳ್ಳಿ ಗುಲಾಬಚಂದ ಜಾಧವ;

ಉತ್ತರಪ್ರಭ ಆಲಮಟ್ಟಿ: ದಿನದ 24 ಗಂಟೆಯಲ್ಲಿ ಎಷ್ಟು ಕಾಲ ಓದ್ತಿರಾ, ಟಿವಿ ನೋಡ್ತಿರಾ, ಹರಟೆ ಹೋಡ್ತಿರಾ,…

ಅವ್ವ ಪಾಸಿಟಿವ್, ಐಸಿಯುನಲ್ಲಿ ಕಂದ: ಗದಗ ಜಿಮ್ಸ್ ಸಿಬ್ಬಂದಿಯೇ ತಾಯಿ-ತಂದೆ..!

ಗದಗ: ಕೋವಿಡ್ ಸೋಂಕಿತ ಗರ್ಭಿಣಿಗೆ ಸಿಸೇರಿನ್ ಮೂಲಕ ಹೆರಿಗೆ ಮಾಡಿ, ತಾಯಿ-ಮಗು ಇಬ್ಬರ ಜೀವ ಕಾಪಾಡಿದ…