ಬಜಪೆ : ಇಲ್ಲಿಯ ಕೆಂಜಾರು ತಂಗಡಿ ಪ್ರದೇಶದ ಒಂದೇ ಮನೆಯ ನಾಲ್ಕು ಜನರಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಈ ಕುಟುಂಬಸ್ಥರ ಸಂಪರ್ಕಕ್ಕೆ ಬಂದಿದ್ದ ಸುತ್ತಲಿನ ನಾಲ್ಕು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಈ ಕುಟುಂಬಸ್ಥರು ಇತ್ತೀಚೆಗೆ ಮಹಾರಾಷ್ಟ್ರದಿಂದ ಬಂದಿದ್ದರು. ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು. ಮೇ. 20 ರಂದು ನಾಲ್ಕು ಜನರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ಅವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ, ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ನಾಲ್ಕು ಮನೆಗಳನ್ನು ಇಂದು ಸೀಲ್ ಡೌನ್ ಮಾಡಲಾಗಿದ್ದು, ನಾಲ್ಕು ಮನೆಯಲ್ಲಿ ಒಟ್ಟು 35 ಜನರಿದ್ದಾರೆ. ಅದರಲ್ಲಿ ಪ್ರಾಥಮಿಕ ಸಂಪರ್ಕ ಹೊಂದಿದ 10 ಜನರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ. ಅಲ್ಲದೇ, ತಂಗಡಿ ಸಮೀಪದ 62 ಮನೆಗಳ ಸುಮಾರು 240 ಜನರನ್ನು ಕಂಟೈನ್ಮೆಂಟ್ ಝೋನ್ ಗೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಅತಿ ವೇಗವಾಗಿ ಹರಡುತ್ತಿದೆ ಡೆಲ್ಟಾ ವೈರಸ್ : WHO ನಿರ್ದೇಶಕ ಟೆಡ್ರೊಸ್!

ಡೆಲ್ಟಾ ವೈರಸ್ ನಿಂದ ಸಾರ್ವಜನಿಕರ ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿದೆ. ಹಾಗಾಗಿ ಕಡಿಮೆ ಲಸಿಕೆ ನೀಡಿರುವ ರಾಷ್ಟ್ರಗಳಲ್ಲಿ ಆರೋಗ್ಯ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ಹಾಗೂ ಯಾವ ದೇಶದಲ್ಲೂ ಕೂಡ ಸಂಪೂರ್ಣವಾಗಿ ಸೊಂಕು ನಿವಾರಣೆಯಾಗಿಲ್ಲ ಎಂದು ಹೇಳಿದ ಟೆಡ್ರೊಸ್, ಈ ಸೋಂಕನ್ನು ತಡೆದು ಹಾಕಲು ಇಡೀ ಪ್ರಪಂಚವೇ ಒಟ್ಟಾಗಿ ಸೋಂಕಿನ ವಿರುದ್ಧ ಹೋರಾಡಬೇಕಿದೆ‌. ನಾವು ಕೋವಿಡ್ ಮತ್ತು ಡೆಲ್ಟಾ ಇವೆರಡರ ಮಧ್ಯೆ ಸಿಲುಕಿ ಕೊಂಡಿದ್ದೇವೆ ಹಾಗಾಗಿ ಎಚ್ಚರದಿಂದಿರಬೇಕಿದೆ ಎಂದು ಟೆಡ್ರೊಸ್ ಹೇಳಿಕೆ ನೀಡಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ವಿವಿದೆಡೆ ತಾಪಂ ಇಓ ಅವರಿಂದ ಲಸಿಕಾಕರಣದ ಮೇಲ್ವೀಚಾರಣೆ

ಕೋವಿಡ್ ಲಸಿಕೆ ಪಡೆದ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿ ಸುರಕ್ಷಿತವಾಗಿದ್ದು, ಗ್ರಾಮೀಣ ಭಾಗದ ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ಹೇಳಿದರು.

ಕೃಷ್ಣಾ ನದಿತೀರದ ಪ್ರವಾಹಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ ಆಲಟ್೯ರಾಗಿರಲು ಸೂಚನೆ

ಉತ್ತರಪ್ರಭಆಲಮಟ್ಟ: ಕೃಷ್ಣಾ ನದಿ ತೀರದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಧಾರಾಕಾರ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ…

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…