ನವದೆಹಲಿ: ಸೋಂಕಿತ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಎಂದು ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಸೂಚಿಸಿದೆ.
ದೇಶಾದ್ಯಂತದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಯ ದುಬಾರಿ ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ, ಹಲವು ಖಾಸಗಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸರ್ಕಾರ ಭೂಮಿಯನ್ನು ಉಚಿತವಾಗಿ ಅಥವಾ ಅತ್ಯಂತ ಕಡಿಮೆ ದರದಲ್ಲಿ ನೀಡಲಾಗಿದೆ. ಈಗ ಅಂತಹ ರಸ್ ಸೋಂಕಿತ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದಿದೆ.
ಆಸ್ಪತ್ರೆಗಾಗಿ ಉಚಿತ ಅಥವಾ ಕಡಿಮೆ ದರಕ್ಕೆ ಭೂಮಿ ಪಡೆದ ಚಾರಿಟೇಬಲ್ ಆಸ್ಪತ್ರೆಗಳನ್ನು ಸರ್ಕಾರ ಗುರುತಿಸಬೇಕು ಎಂದು ಸುಪ್ರೀಂ ಕೋರ್ಟ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.

Leave a Reply

Your email address will not be published. Required fields are marked *

You May Also Like

ಎಸ್ ಐಟಿ ವಿಚಾರಣೆಯಲ್ಲಿ ಪ್ರಧಾನಿ ಮೋದಿ ಹೇಗೆ ವರ್ತಿಸಿದ್ದರು?

ನವದೆಹಲಿ : 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಅವರು ಎಸ್ ಐಟಿ ವಿಚಾರಣೆ ಎದುರಿಸಿದ್ದರು. ಈ ಕುರಿತು ಕೇಳಿದ್ದ ಬರೋಬ್ಬರಿ 100 ಪ್ರಶ್ನೆಗಳಿಗೆ 9 ಗಂಟೆಗಳ ಕಾಲ ಉತ್ತರಿಸಿದ್ದಾರೆ. ಈ ಅವಧಿಯಲ್ಲಿ ಟೀ ಕೂಡ ಅವರು ಸೇವಿಸಿರಲಿಲ್ಲ ಎಂದು ತನಿಖೆಯ ತಂಡದಲ್ಲಿದ್ದ ಆರ್.ಕೆ. ರಾಘವನ್ ಹೇಳಿದ್ದಾರೆ.

ಗಣೇಶೋತ್ಸವ ಆಚರಣೆ ಮಾರ್ಗಸೂಚಿಗಳು: ನಿಯಮ ಪಾಲನೆಗೆ ಡಿಸಿ ಸೂಚನೆ

ಗಣೇಶೋತ್ಸವ ಆಚರಿಸುವ ಸಂಬಂಧ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಿದ್ದು, ಅವುಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಸರಳ ಗಣೇಶೋತ್ಸವ ಆಚರಿಸುವಂತೆ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.

ದೇಶದಲ್ಲಿ 2ನೇ ಬಾರಿಗೆ ಪತ್ತೆಯಾಯ್ತು ನಿಗೂಢ ಏಕಶಿಲೆ..!

ಜಗತ್ತಿನ ಹಲವೆಡೆ ಪತ್ತೆಯಾಗಿ ಬೆರಗು ಮೂಡಿಸಿದ್ದ ನಿಗೂಢ ಏಕಶಿಲೆ ಇದೀಗ ಭಾರತದಲ್ಲೂ ಎರಡನೇ ಬಾರಿಗೆ ಕಾಣಿಸಿಕೊಂಡಿದ್ದು, ಮುಂಬೈನ ಉಪನಗರ ಬಾಂದ್ರಾದ ಜಾಗ್ಗರ್ಸ್ ಪಾರ್ಕ್ನಲ್ಲಿ ನಿಗೂಢ ಏಕಶಿಲೆ ಪತ್ತೆಯಾಗಿರುವ ಬಗ್ಗೆ ಸ್ಥಳೀಯ ಕಾರ್ಪೋರೇಟರ್ ಆಸಿಫ್​ ಝಕೆರಿಯಾ ಇಂದು ಬೆಳಗ್ಗೆ ಟ್ವೀಟ್​ ಮಾಡಿ ತಿಳಿಸಿದ್ದಾರೆ.

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.