ಭೋಪಾಲ್: ಮದುವೆ ಸಂಭ್ರಮದಲ್ಲಿ ಹಾಜರಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ನವ ದಂಪತಿ ಸೇರಿದಂತೆ 100 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವಧುವಿನ ಸಂಬಂಧಿಯೊಬ್ಬರಿಗೆ ಮಂಗಳವಾರ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ದಂಪತಿ ಹಾಗೂ ಇತರೆ 100 ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಚಿಂದ್ವಾರ ನಗರ ಪಾಲಿಕೆ ಆಯುಕ್ತ ರಾಜೇಶ್ ಶಾಹಿ ಅವರು ತಿಳಿಸಿದ್ದಾರೆ.

ಕೊರೊನಾ ಪಾಸಿಟಿವ್ ಬಂದಿರುವ ವಧುವಿನ ಸಂಬಂಧಿ ಸಿಐಎಸ್ಎಫ್ ಸಿಬ್ಬಂದಿಯಾಗಿದ್ದು, ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇ. 26ರಂದು ಮದುವೆಯಲ್ಲಿ ಭಾಗವಹಿಸಿದ್ದರು.

ಅವರಿಗೆ ಮೂರ್ನಾಲ್ಕು ದಿನಗಳ ಹಿಂದೆಯೇ ಸೋಂಕಿನ ಲಕ್ಷಣಗಳು ಕಂಡು ಬಂದಿತ್ತು. ನಂತರ ಅವರ ಮಾದರಿಯನ್ನು ತೆಗೆದುಕೊಳ್ಳಲಾಯಿತು ಮತ್ತು ಅವರನ್ನು ಚಿಂದ್ವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ. ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.

ಉತ್ತರದಲ್ಲಿ ರಣ ಬಿಸಿಲು….ದಕ್ಷಿಣದಲ್ಲಿ ಭರ್ಜರಿ ಮಳೆ!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ. ವಿಜಯಪುರ…

ಗೂಗಲ್ ಫೋಟೋ ಬ್ಯಾಕ್ಅಪ್ ಸ್ಟೋರೇಜ್ ಗೆ ಇನ್ಮುಂದೆ ಹಣ ಪಾವತಿಸಬೇಕು

ಈಗಾಗಲೇ ಹಲವು ವರ್ಷಗಳಿಂದ ಮೊಬೈಲ್ ಗಳಲ್ಲಿ ಗೂಗಲ್ ಫೋಟೋಗಳು ಉಚಿತವಾಗಿ ಸಿಗುತ್ತಿದ್ದವು. ಆದರೆ ಇನ್ಮುಂದೆ ಹಾಗಿಲ್ಲ. ಫೋಟೋ ಬ್ಯಾಕ್ ಅಪ್ ಸ್ಟೋರೇಜ್ ಮಾಡಲು ಹಣ ಪಾವತಿಸುವಂತಾಗಿದೆ.

ಗದಗ ಜಿಲ್ಲೆಯಲ್ಲಿ ಕೊರೊನಾಕ್ಕೆ ಯುವಕ ಬಲಿ

ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಓರ್ವ ಯುವಕ ಇಂದು ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ…