ರೋಣ: ಕೃಷಿ ಉತ್ಪನ್ನ ಮಾರುಕಟ್ಟೆ(ಕೇಂದ್ರ ಕಚೇರಿ ಹೊಳೆಆಲೂರ) ಸಮಿತಿಯ ಕೊನೆಯ ಅವಧಿಗೆ ನೂತನ ಅಧ್ಯಕ್ಷರಾಗಿ ರೋಣ ರೈತ ಕ್ಷೇತ್ರದ ಸದಸ್ಯ ಅಂದಾನಪ್ಪ ಉರ್ಫ ರಾಜಣ್ಣ ಹೂಲಿ,ಉಪಾಧ್ಯಕ್ಷರಾಗಿ ಹೊಳೆಆಲೂರ ಕ್ಷೇತ್ರದ ಸದಸ್ಯ ಶಿವಾನಂದ ಅರಹುಣಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬುಧವಾರ ರೋಣ ತಾಲೂಕಿನ ಹೊಳೆಆಲೂರಿನ ಎಪಿಎಮ್‌ಸಿ ಕೇಂದ್ರ ಕಛೇರಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಲಿತ ಅಭ್ಯರ್ಥಿಗಳಾದ ಅಂದಾನಪ್ಪ ಹೂಲಿ ಹಾಗೂ ಶಿವಾನಂದ ಅರಹುಣಸಿ ಅವರು ಕ್ರಮವಾಗಿ ನಾಮ ಪತ್ರ ಸಲ್ಲಿಸಿದ್ದರು.ಎರಡು ಸ್ಥಾನಗಳಿಗೆ ಒಂದೊಂದೆ ನಾಮ ಪತ್ರಗಳ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ರೋಣ ತಹಶಿಲ್ದಾರ ಜಿ.ಬಿ.ಜಕ್ಕನಗೌಡ್ರ ಈ ಇಬ್ಬರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
೧೪ ಚುನಾಯಿತ ಸದಸ್ಯರ ಬಲ ಹೊಂದಿರುವ ಈ ಎಪಿಎಂಸಿ ಯಲ್ಲಿ ೩ ನಾಮನಿರ್ದೇಶಿತ ಸದಸ್ಯರನ್ನೊಳಗೊಂಡು ಒಟ್ಟು ಬಿಜೆಪಿ ೧೦ ಸದಸ್ಯರನ್ನು ಹೊಂದುವ ಮೂಲಕ ಸರಳ ಬಹುತದೊಂದಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನು ಬಿಜೆಪಿ ತನ್ನ ತೆಕ್ಕೆಗೆ ಪಡೆಯಿತು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಶಾಸಕ ಕಳಕಪ್ಪ ಬಂಡಿ,ಅಭಿನಂಧಿಸಿದರು.
ಈ ಸಂದರ್ಭದಲ್ಲಿ ಮಾಜಿ ಎಪಿಎಂಸಿ ಅಧ್ಯಕ್ಷ ವಿರಣ್ಣ ಶೆಟ್ಟರ, ಅಂಬರೀಶ ಅರಳಿ,ಬಿಜೆಪಿ ಮುಖಂಡರಾದ ಅಂಬರೀಶ ಬಳಿಗೇರ, ಜಿ.ಪಂ ಸದಸ್ಯರಾದ ಶಿವುಕುಮಾರ ನೀಲಗುಂದ, ಪಡಿಯಪ್ಪ ಪೂಜಾರ,ತಾಪಂ ಅಧ್ಯಕ್ಷೆ ಪ್ರೇಮವ್ವ ನಾಯಕ, ವೆಂಕನಗೌಡ ಗೋವಿಂದಗೌಡ್ರ, ಮಗನಗೌಡ ಮಾಲಿಪಾಟೀಲ,ಮುದಿಯಪ್ಪ ಕರಡಿ, ಶಂಕರಪ್ಪ ಸೂಳಿಕೇರಿ, ಸಂಕನಗೌಡ ಅಮಾತಿಗೌಡ್ರ, ಬಾಜಪಾ ಹೋಬಳಿ ಘಟಕದ ಅಧ್ಯಕ್ಷ ಮುತ್ತಣ್ಣ ಜಂಗಣ್ಣವರ, ಗಿರೀಶ ಚನ್ನಪ್ಪಗೌಡ್ರ, ಬಸವರಾಜ ಕಾತರಕಿ, ಶ್ರೀಶೈಲ ಹಿರೇಹಾಳ, ವರ್ತಕರಾದ ಶಿವಣ್ಣ ಯಾವಗಲ್ಲ, ಶೇಕಪ್ಪ ಹಿರೇಹಾಳ ಬಸವರಾಜ ಸಂಗಟಿ ಹಾಗೂ ಸದಸ್ಯರು ಇದ್ದರು.

Leave a Reply

Your email address will not be published. Required fields are marked *

You May Also Like

ತುರ್ತು ವಾಹನ ಸೇವೆ ಒದಗಿಸಿ ಜನರಿಂದ ಸೈ ಎನಿಸಿಕೊಂಡ ಗ್ರಾಪಂ ಸದಸ್ಯ ಜಹೀರ್

ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಜನಸಾಮಾನ್ಯರ ಬದುಕು ತೀರಾ ಸಂಕಷ್ಟಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸೇವಾ ಕಾರ್ಯಕ್ಕೆ ಅಣಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ, ಗ್ರಾಮದಲ್ಲಿ ಉಚಿತ ತುರ್ತು ಸೇವಾ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ.

ದುಬೈನಲ್ಲಿಯೂ ನೆಲೆಸಿತು ಬಸವಣ್ಣನವರ ಪ್ರತಿಮೆ!

ಬೆಂಗಳೂರು : ಕ್ರಾಂತಿಕಾರಿ ಬಸವಣ್ಣನ ವಚನ, ಸಾಹಿತ್ಯದ ಮಹತ್ವ ಹಾಗೂ ವಿಚಾರಧಾರೆ ದೇಶದ ಗಡಿಯಾಚೆಗೂ ಪಸರಿಸಿದೆ.ಎಂ.ಬಿ.ಪಾಟೀಲ್…

ಹೊರ ರಾಜ್ಯಗಳಿಗೆ ಹೋಗಲು -ಬುರವಿಕೆಗೆ ಅನುಮತಿ

ಹೊರ ರಾಜ್ಯಗಳಲ್ಲಿ ಸಿಲುಕಿರುವ ಅಥವಾ ಸ್ವಂತ ರಾಜ್ಯಕ್ಕೆ ಸ್ಥಳಕ್ಕೆ ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು,ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಪ ಸದಸ್ಯ ಪ್ರಸನ್ನಕುಮಾರ್ ಅವರ ಪುತ್ರ ನಿಧನ!

ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.