ಧಾರವಾಡ:ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಬಂದ ಗರ್ಭಿಣಿಯರು ಕಾದು ಕಾದು ಸುಸ್ತಾದ ಘಟನೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಸದ್ಯ ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ. ಜಿಲ್ಲಾಡಳಿತ ಈ ಕುರಿತು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿನ ಗರ್ಭಿಣಿಯರನ್ನು ಕೊರೊನಾ ಟೆಸ್ಟ್ ಮಾಡಿಸಲು ಕರೆದುಕೊಂಡು ಬಂದಿದ್ದರು.
ಆದರೆ, ಗರ್ಭಿಣಿಯರನ್ನು ಪರೀಕ್ಷೆ ಮಾಡದೆ, ಆಸ್ಪತ್ರೆ ಸಿಬ್ಬಂದಿ ಅವರನ್ನು ಕಾದು ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಇದರಿಂದಾಗಿ ಗರ್ಭಿಣಿಯರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಸ್ವ್ಯಾಬ್ ಕೇಂದ್ರದ ಎದುರು ನಿಲ್ಲುವುದಕ್ಕೂ ಸಹ ಸೂಕ್ತ ಸ್ಥಳ ಇಲ್ಲ. ಹೀಗಾಗಿ ಗರ್ಭಿಣಿಯರು ಬಿಸಿಲಿನಲ್ಲಿಯೇ ಬೆಳಿಗ್ಗೆಯಿಂದ ಕಾದು ಕುಳಿತುಕೊಳ್ಳುವಂತಾಗಿತ್ತು.