ಧಾರವಾಡ:ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಬಂದ ಗರ್ಭಿಣಿಯರು ಕಾದು ಕಾದು ಸುಸ್ತಾದ ಘಟನೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಸದ್ಯ ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ. ಜಿಲ್ಲಾಡಳಿತ ಈ ಕುರಿತು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿನ ಗರ್ಭಿಣಿಯರನ್ನು ಕೊರೊನಾ ಟೆಸ್ಟ್ ಮಾಡಿಸಲು ಕರೆದುಕೊಂಡು ಬಂದಿದ್ದರು.

ಆದರೆ, ಗರ್ಭಿಣಿಯರನ್ನು ಪರೀಕ್ಷೆ ಮಾಡದೆ, ಆಸ್ಪತ್ರೆ ಸಿಬ್ಬಂದಿ ಅವರನ್ನು ಕಾದು ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಇದರಿಂದಾಗಿ ಗರ್ಭಿಣಿಯರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಸ್ವ್ಯಾಬ್ ಕೇಂದ್ರದ ಎದುರು ನಿಲ್ಲುವುದಕ್ಕೂ ಸಹ ಸೂಕ್ತ ಸ್ಥಳ ಇಲ್ಲ. ಹೀಗಾಗಿ ಗರ್ಭಿಣಿಯರು ಬಿಸಿಲಿನಲ್ಲಿಯೇ ಬೆಳಿಗ್ಗೆಯಿಂದ ಕಾದು ಕುಳಿತುಕೊಳ್ಳುವಂತಾಗಿತ್ತು.

Leave a Reply

Your email address will not be published. Required fields are marked *

You May Also Like

ಕೊರೊನಾ ಕರ್ಪ್ಯೂಗೆ ಶಿರಹಟ್ಟಿ ಸಂಪೂರ್ಣ ಸ್ತಬ್ಧ..!

ಕೊರೊನಾ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ವೀಕೆಂಡ್ ಕಫ್ಯೂ೯ಗೆ ಶನಿವಾರ ಪಟ್ಟಣ ಸಂಪೂರ್ಣ ಸ್ಥಬ್ಧವಾದ ಚಿತ್ರಣ ಕಂಡು ಬಂದಿತು.

ಕಮಲ ಕೈಯಲ್ಲಿ ಹಿಡಿದ ರಾಜರಾಜೇಶ್ವರಿ – ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ!

ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ಸನಿಹಕ್ಕೆ ಬಂದು ನಿಂತಿದ್ದಾರೆ.

ಜೂ.14ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆ!

ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಮಳೆ ಬಂದರೆ ಸಾಕು ಹಾಸ್ಟೆಲ್ ತುಂಬ ನೀರು; ಪರದಾಡುತ್ತಿರುವ ಹಾಸ್ಟೆಲ್ ವಿದ್ಯಾರ್ಥಿಗಳು..!

ಉತ್ತರಪ್ರಭಗದಗ: ನಿನ್ನೆ ರಾತ್ತಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಗದಗ ನಗರದ ಹಾತಲಗೇರಿ ರಸ್ತೆಯಲ್ಲಿರುವ…