ಗದಗ: ಕಪ್ಪತ್ತಗುಡ್ಡ ರಕ್ಷಣೆ ಮಾಡುವ ವಿಚಾರದಲ್ಲಿ ನಮ್ಮ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಆದರೆ ಈಗೀನ ಬಿ.ಎಸ್.ವೈ ಸರ್ಕಾರ ಗಣಿಗಾರಿಕೆ ಮುಕ್ತ ಮಾಡುವಲ್ಲಿ ಬಹುತೇಕ ಕೆಲಸ ಮುಗಿಸಿದೆ. ಈ ನಿಟ್ಟಿನಲ್ಲಿ ಕಪ್ಪತ್ತಗುಡ್ಡ ಸಂರಕ್ಷಣೆಗಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಜನಾಂದೊಲನ ಒಂದೇ ಪರಿಹಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಅವರು ಈ ಕುರಿತು ಗದಗನಲ್ಲಿ ಮಾತನಾಡಿ, ಕಪ್ಪತ್ತಗುಡ್ಡ ಸಂರಕ್ಷಣೆಗಾಗಿ ನಮ್ಮ ಪಕ್ಷದಿಂದ ಸಹ ಕಪ್ಪತ್ತಗುಡ್ಡ ಉಳಿವಿಗಾಗಿ ಹೋರಾಟ ಮಾಡುತ್ತೇವೆ ಎಂದರು.

ಇದೇ ವೇಳೆ  ಕರೊನಾ ವೈರಸ್ ವಿಷಯದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಲೋಪ ದೋಷಗಳನ್ನು ಮಾಡಿದೆ. ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿ ಅವೈಜ್ಞಾನಿಕವಾಗಿತ್ತು. ಕೇವಲ ನಾಲ್ಕು ಗಂಟೆ ಕಾಲಾವಕಾಶ ನೀಡಿ ಲಾಕ್ ಡೌನ್ ಜಾರಿ ಮಾಡಿದ್ದರಿಂದ ಕೋಟ್ಯಾಂತರ ಜನರಿಗೆ ಸಮಸ್ಯೆಯಾಗಿದೆ. ದೇಶದಲ್ಲಿ 1947 ಸಂದರ್ಭಗಳಲ್ಲಿ ಉಂಟಾದ ಸಮಸ್ಯೆ ಮತ್ತೆ ಉಂಟಾಗಿದೆ. ಜನರು ಸಾರಿಗೆ ವ್ಯವಸ್ಥೆ ಇಲ್ಲದೆ ಸಾವಿರಾರು ಕಿಲೋಮೀಟರ್ ನಡೆದುಕೊಂಡು ಹೋಗುವಂತ ಸ್ಥಿತಿ ನಿರ್ಮಾಣವಾಗಿತ್ತು. ಕೇಂದ್ರ ಸರ್ಕಾರ 20 ಲಕ್ಷ  ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಿದೆ ಆದರೆ ಆ ಯೋಜನೆ ಎಲ್ಲರಿಗೂ ಸರಿಯಾಗಿ ತಲುಪುವುದಿಲ್ಲ ಎಂದು ಆರೋಪಿಸಿದರು.

ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಮೂವರು ಕಾರ್ಯಧ್ಯಕ್ಷರ ಪದ ಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರೊನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ಆಯಾ ಗ್ರಾಮಗಳಲ್ಲಿ ಸಣ್ಣ ಸಣ್ಣ ಕಾರ್ಯಕ್ರಮ ಆಯೋಜನೆ ಮಾಡಲು ಹೇಳಲಾಗಿದೆ. ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿಕೊಂಡು ಕಾರ್ಯಕ್ರಮ ಯಶಸ್ವಿ ಮಾಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಸಿಎಂ: ವರ್ಕ್ ಫ್ರಂ ಹೋಂ?ಅಥವಾ ಹೋಂ ಕ್ವಾರಂಟೈನ್?

ಬೆಂಗಳೂರು: ನಾನು ಆರೋಗ್ಯವಾಗಿರುವೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ…

ಇಂಧನ ದರ ಏರಿಕೆ ವಿರೋಧಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು: ಕಳೆದ 15 ದಿನಗಳಿಂದ ನಿರಂತರವಾಗಿ ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಡಿಕೆಶಿ ಮಗಳ ಮದುವೆ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಶ್ವರ್ಯ-ಅಮರ್ಥ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಹಾಗೂ ಡಿ.ಕೆ.ಶಿವಕುಮಾರ್ ಪುತ್ರಿಯ ಮದುವೆಯಲ್ಲಿ ಇಂದು ಕಾಂಗ್ರೆಸ್, ಬಿಜೆಪಿ ರಾಜಕೀಯ ನಾಯಕರೂ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಂದಿನ ಮದುವೆಗೆ ಒಟ್ಟು ೮೦೦ ಗಣ್ಯರಿಗೆ ಆಹ್ವಾನ ನೀಡಲಾಗಿದೆ.