ಭುವನೇಶ್ವರ್: ಕೊರೊನಾ ಮಹಾಮಾರಿಯ ಆಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಸದ್ಯ ಜನರ ಪ್ರತಿಯೊಂದು ಕಾರ್ಯಕ್ಕೂ ಅಡ್ಡಿಯಾಗಿದೆ.

ಇಲ್ಲೊಂದು ಜೋಡಿಗೂ ಇದು ಅಡ್ಡವಾದ ಪ್ರಸಂಗ ನಡೆದಿದೆ. ಪ್ರೀತಿಸಿ ಓಡಿಹೋದ ಜೋಡಿಯೊಂದು ಕ್ವಾರಂಟೈನ್ ಕೇಂದ್ರದಲ್ಲಿ ಮದುವೆಯಾದ ಘಟನೆ ಒಡಿಶಾದಲ್ಲಿ ನಡೆದಿದೆ.

ಈ ನವ ಜೋಡಿ ಜನೇವರಿಯಲ್ಲಿಯೇ ತಮ್ಮ ಮನೆಯಿಂದ ಓಡಿ ಬಂದಿದ್ದರು. ಪುರಿ ಜಿಲ್ಲೆಯ ಸಗದ ಗ್ರಾಮದ ಸೌರಭ್ ದಾಸ್(19) ಭಾನುವಾರ ತನ್ನ ಪ್ರಿಯತಮೆ ಪಿಂಕ್ಯಾರಾಣಿ ದಾಸ್ ಳನ್ನು 14 ದಿನಗಳ ಕ್ವಾರಂಟೈನ್ ಮುಗಿಸಿ ಕೇಂದ್ರದಲ್ಲಿಯೇ ಮದುವೆಯಾಗಿದ್ದಾನೆ. ಯುವಕನ ಮೇಲೆ ಯುವತಿ ಕುಟುಂಬಸ್ಥರು ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.

ಸೌರಭ್ ಅಹಮದಾಬಾದ್ ನಲ್ಲಿ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಕೊರೊನಾ ಹೆಮ್ಮಾರಿಯಿಂದ ಲಾಕ್ ಡೌನ್ ಆದ ಪರಿಣಾಮ ಕೆಲಸ ಇರಲಿಲ್ಲ. ಹೀಗಾಗಿ ಇಬ್ಬರು ಮತ್ತೆ ತಮ್ಮ ತಾಯ್ನಾಡಿಗೆ ಬರಲು ಕಷ್ಟಪಡುತ್ತಿದ್ದರು. ಹೇಗೋ ಕಷ್ಟಪಟ್ಟು ಕೊನೆಗೂ ಜೋಡಿ ತಮ್ಮ ಗ್ರಾಮಕ್ಕೆ ವಾಪಸ್ಸಾಗಿತ್ತು. ಈ ವೇಳೆ ಅವರನ್ನು ಕೂಡಲೇ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು.

Leave a Reply

Your email address will not be published. Required fields are marked *

You May Also Like

ವಿಕೆಂಡ್ ಮೀಟಿಂಗ್ ನಲ್ಲಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸುತ್ತಾ ಬಿಜೆಪಿ?

ಬಿಜೆಪಿ ಕೋರ್ ಕಮೀಟಿಯ ಮೀಟಿಂಗ್ ಗೆ ಇದೀಗ ಹೆಚ್ಚು ಮಹತ್ವ ಬಂದಿದ್ದು ವಿಕೇಂಡ್ ಮೀಟಿಂಗ್ ಯಾವ ನಿರ್ಧಾರಕ್ಕೆ ಸಾಕ್ಷಿಯಾಗಲಿದೆ ಎನ್ನುವುದು ಆಕಾಂಕ್ಷಿಗಳಲ್ಲಿ ಆಸಕ್ತಿ ಮೂಡಿಸಿದೆ.

ಒಬ್ಬನ ಕೊಲ್ಲಲು ಇಲ್ಲಿ ಲಾಂಗ್ ಹಿಡಿದು ಬಂದವರು ಎಷ್ಟು ಜನ ಗೊತ್ತಾ?

ಮುಂಬಯಿ : ಒಬ್ಬನನ್ನು ಕೊಲ್ಲಲು ನೂರು ಜನ ಲಾಂಗ್ ಹಿಡಿದುಕೊಂಡು ಬಂದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಗುಜರಾತ್ ಬಿಜೆಪಿಗೆ ಶಾಕ್: ಕೈ ಶಾಸಕರು ರೆಸಾರ್ಟ್ ಗೆ ಶಿಫ್ಟ್..!

ಜೈಪುರ: ಗುಜರಾತ್ ಕಾಂಗ್ರೆಸ್ ನ ಕೆಲವು ಶಾಸಕರನ್ನು ಕಾಂಗ್ರೆಸ್ ರಾಜಸ್ಥಾನದ ಸಿರೋಹಿಯಲ್ಲಿರುವ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ.…