ಮುಂಬಯಿ: ತಾವು ಇಟ್ಟ ಹಣಕ್ಕೆ ಬಡ್ಡಿಯಾದರೂ ಸಿಗುತ್ತೆ ಎನ್ನುವ ಕಾರಣಕ್ಕೆ ಬಹುತೇಕರು ಬ್ಯಾಂಕಿನಲ್ಲಿ ಹಣ ಠೇವಣಿ ಇಡುವುದು ಸಹಜ. ಆದರೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಡೆಪಾಸಿಟ್ ಮೇಲಿನ ಬಡ್ಡಿ ಹಣವನ್ನೇ ಇಳಿಕೆ ಮಾಡಿದೆ. ಈ ಮೂಲಕ ಠೇವಣಿದಾರರಿಗೆ ಎಸ್.ಬಿ.ಐ ಆಘಾತ ನೀಡಿದೆ. ಇನ್ನು ಎಸ್.ಬಿ.ಐನ ಈ ನಿರ್ಧಾರವನ್ನೇ ಉಳಿದ ಬ್ಯಾಂಕ್ ಗಳು ಕೂಡ ಪಾಲಿಸುವ ಸಾದ್ಯತೆ ಇದೆ ಎನ್ನಲಾಗುತ್ತಿದೆ.

ರಿಸರ್ವ್ ಬ್ಯಾಂಕ್ ರೆಪೊ ದರಗಳನ್ನು ಕಡಿತ ಮಾಡಿದ ಬೆನ್ನಲ್ಲಿಯೇ ಎಸ್.ಬಿ.ಐ ಕೂಡ ಈ ನಿರ್ಧಾರ ಕೈಗೊಂಡಿದೆ. ಎಲ್ಲ ಬಗೆಯ ಠೇವಣಿಗಳ ಮೇಲಿನ ಬಡ್ಡಿಯನ್ನು ಶೇ.4ರಷ್ಟು ಇಳಿಕೆ ಮಾಡಿದೆ. ಹೊಸ ಬಡ್ಡಿ ದರ ಬುಧವಾರದಿಂದಲೇ ಜಾರಿಗೆ ಬಂದಿದೆ. ಹೊಸ ಠೇವಣಿ ಹಾಗೂ ನವೀಕರಣಗೊಳ್ಳುವ ಠೇವಣಿಗಳಿಗೆ ಹೊಸ ದರವೇ ಅನ್ವಯವಾಗಲಿದೆಯಂತೆ. ಶೇ. 7.75 ಬಡ್ಡಿ ನೀಡುತ್ತಿದ್ದ ಆರ್.ಬಿ.ಐನ ಸಣ್ಣ ಉಳಿತಾಯ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಿದ ಬೆನ್ನಲ್ಲಿಯೇ ಈಗ ಎಸ್.ಬಿ.ಐ ಈ ಕ್ರಮಕ್ಕೆ ಮುಂದಾಗಿದೆ. ಏಳು ದಿನಗಳ ಕನಿಷ್ಟ ಅವಧಿಯ ಠೇವಣಿ ಮೇಲೆ ಈವರೆಗೆ ಶೇ. 3.3 ಬಡ್ಡಿ ಸಿಗುತ್ತಿತ್ತು. ಆದರೆ ಇದೀಗ ಶೇ. 2.9ರ ಬಡ್ಡಿ ಹಣ ಸಿಗಲಿದೆ.

ಮೇ.12ರಂದು ಮೊದಲ ಕಂತಿನಲ್ಲಿ ಠೇವಣಿ ಮೇಲಿನ ಬಡ್ಡಿ ದರ ಇಳಿಕೆ ಮಾಡಲಾಗಿತ್ತು. ಈ ಮೂಲಕ ತಿಂಗಳಲ್ಲಿ ಎರಡನೇ ಬಾರಿ ಎಸ್.ಬಿ.ಐ ಠೇವಣಿ ಮೇಲಿನ ಬಡ್ಡಿ ದರ ಇಳಿಕೆ ಮಾಡಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ಮಹದಾಯಿ ವಿಚಾರ : ಮತ್ತೆ ಗೋವಾ ಕ್ಯಾತೆ ಮಹಾದಾಯಿ ಯೋಜನೆಗೆ ಸರ್ಕಾರದ ವಿಳಂಭ ಧೋರಣೆಗೆ ಆಕ್ರೋಶ

ಮಹಾದಾಯಿ ವಿಚಾರದಲ್ಲಿ ಮತ್ತೆ ಗೋವಾ ಕ್ಯಾತೆ ತೆಗೆದಿದೆ. ಇದರಿಂದಾಗಿ ಮಹದಾಯಿ ಹೋರಾಟದ ನಾಡಲ್ಲಿ ಮತ್ತೆ ಹೋರಾಟಗಾರರು ಗೋವಾ ನಡೆಗೆ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಪಂಜಾಬ್ ನಲ್ಲಿ ಲಾಕ್ ಡೌನ್ ಮುಂದುವರಿಕೆ!!

ಅಮೃತಸರ : ಪಂಜಾಬ್ ರಾಜ್ಯದಲ್ಲಿ ಕೊರೊನಾ ವೈರಸ್ ಲಾಕ್ ಡೌನ್ ಮೇ. 31 ರ ವರೆಗೆ…

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೊರೋನಾ ಸೋಂಕು ಹರಡುತ್ತಿರುವುದರ ಹಿಂದಿನ ಕ್ವಾರಂಟೈನ್ ಕಥೆ ಏನು ಗೊತ್ತಾ..!

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚತ್ತಲಿದ್ದು ಜನರಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ. ಆದರೆ ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬರುತ್ತದೆ ಎನ್ನುವಷ್ಟರಲ್ಲಿ ವಲಸಿಗರಿಗೆ ವಿನಾಯಿತಿ ನೀಡಲಾಯಿತು. ಇದು ಒಂದು ರೀತಿಯಿಂದ ಸೋಂಕು ಮತ್ತಷ್ಟು ಹರಡಲು ಕಾರಣವಾಯಿತು ಎನ್ನಬಹುದು.