ಬೆಂಗಳೂರು : ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಎಲ್ಲ ರೈತರಿಗೆ ರೂ.5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೊದಲು ಮೆಕ್ಕೆಜೋಳ ಬೆಳೆದ ರೈತರಿಗೆ ಮಾತ್ರ ಸರ್ಕಾರ ಪರಿಹಾರ ಘೋಷಿಸಿತ್ತು. ಈ ಘೋಷಣೆಗೆ ಇನ್ನುಳಿದ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಎಲ್ಲ ರೈತರಿಗೂ ರೂ. 5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕ್ಷೌರಿಕರು, ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ ಪರಿಹಾರ ನೀಡಲು ವಿಧಿಸಲಾಗಿದ್ದ ಷರತ್ತುಗಳನ್ನು ಸಡಿಲಿಸಲಾಗಿದೆ. ಎಲ್ಲ ಚಾಲಕರಿಗೂ ಪರಿಹಾರ ನೀಡಲು ನಿರ್ಧರಿಸಲಾಗಿದೆ.
1 comment
Nice disease sir ???? all farmers ar happy