ಯಾದಗಿರಿ: ಜಿಲ್ಲೆಯಲ್ಲಿ ಇಂದು ಕೂಡ 7 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.

ಸೋಂಕಿತರೆಲ್ಲರೂ ಅಂತರ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಮಹಾರಾಷ್ಟ್ರದ ಮುಂಬಯಿ, ಪುಣೆ ಮತ್ತು ಸೊಲ್ಲಾಪುರಿಂದ ಜಿಲ್ಲೆಗೆ ಹಿಂದಿರುಗಿರುವ ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯವರಿಗೆ ಕೊರೊನಾ ಸೋಂಕು ಖಚಿತಪಟ್ಟ ಒಟ್ಟು 163 ಪ್ರಕರಣಗಳ ಪೈಕಿ 9 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಸುರಪುರ ತಾಲೂಕಿನ ಬೇವಿನಾಳ ಎಸ್.ಕೆ. ಗ್ರಾಮದ 28 ವರ್ಷದ ಯುವಕ, 24 ವರ್ಷದ ಪುರುಷ, 28 ವರ್ಷದ ಪುರುಷ, ಯಾದಗಿರಿ ತಾಲೂಕಿನ ಸೈದಾಪೂರ ಗ್ರಾಮದ 24 ವರ್ಷದ ಮಹಿಳೆ, ಶಹಾಪೂರ ತಾಲೂಕಿನ ಉಕ್ಕಿನಾಳ ತಾಂಡಾದ 4 ವರ್ಷದ ಗಂಡು ಮಗು, ಗುರುಮಿಠ್ಠಕಲ್ ನಗರದ 46 ವರ್ಷದ ಪುರುಷ, ಯಾದಗಿರಿ ತಾಲೂಕಿನ ಮೋಟನಳ್ಳಿ ತಾಂಡಾದ 11 ವರ್ಷದ ಬಾಲಕ ಸೇರಿದಂತೆ ಇಂದು 7 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..! ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ…

ಭಾರತೀಯ ಕಿಶಾನ್ ಸಂಘದವತಿಯಿಂದ ರಾಷ್ಟ್ರಪತಿಗೆ ಮನವಿ.

ಉತ್ತರ ಪ್ರಭ ಸುದ್ದಿರೋಣ : ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ…

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ ಅನುಭವಿಸಿದ್ದಾರೆ.…

ಮಕ್ಕಳ ಕಲಿಕಾ ಮೇಳ ಸಂಭ್ರಮ…ವೈವಿಧ್ಯ ಪರಿಕಲ್ಪನೆ ಕೌಶಲ್ಯ ಅನಾವರಣ..!

ಆಲಮಟ್ಟಿ: ಅಲ್ಲಿ ಗಣಿತ, ಭಾಷೆ ಸೇರಿ ನಾನಾ ವಿಷಯಗಳ ಕಠಿಣ ಪರಿಕಲ್ಪನೆಗಳನ್ನು ನಾನಾ ಹೊಸ ಹೊಸ…