ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ2711 ಆಗಿದೆ. ಇದರಲ್ಲಿ 1793 ಪ್ರಕರಣಗಳು ಸಕ್ರೀಯವಾಗಿವೆ. ಈವರೆಗೆ ಒಟ್ಟು ಕೊರೋನಾ ಸೋಂಕಿನಿಂದ 47 ಜನ ಸಾವನ್ನಪ್ಪಿದ್ದಾರೆ. ಇಂದು ಸೋಂಕಿನಿಂದ ಗುಣಮುಖರಾಗಿ ರಾಜ್ಯದಲ್ಲಿ 35 ಜನ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 869 ಜನ. ಇಂದು ಪತ್ತೆಯಾದ 178 ಸೋಂಕಿತ ಪ್ರಕರಣಗಳಲ್ಲಿ 156 ಪ್ರಕರಣಗಳಿಗೆ ಮಹಾರಾಷ್ಟ್ರದ ನಂಟಿದೆ. ಹೀಗಾಗಿ ಏಕಾಏಕಿ ಇಷ್ಟೊಂದು ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು ರಾಜ್ಯದ ಜನರನ್ನು ಸಹಜವಾಗಿಯೇ ಆತಂಕಕ್ಕೀಡು ಮಾಡಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು

ಉಡುಪಿ-15
ಬೆಂಗಳೂರು-11
ಮಂಡ್ಯ-03
ಯಾದಗಿರಿ-54
ದಾವಣಗೆರೆ-04
ಮೈಸೂರು-02
ಕಲಬುರಗಿ-15
ರಾಯಚೂರು-62
ಶಿವಮೊಗ್ಗ-01
ಚಿಕ್ಕಬಳ್ಳಾಪೂರ-04
ಧಾರವಾಡ-01

1 comment
  1. Covid 19, is seriously spreading. So the need of strictly following the decipline of night curfew for all people. Wearing of Mask or face cover is practiced for all.

Leave a Reply

Your email address will not be published. Required fields are marked *

You May Also Like

ಮಕ್ಕಳಿಗೆ ಪ್ರೀತಿ ವಾತ್ಸಲ್ಯ ತೋರಿ-ಎಂ.ಎನ್.ಪದ್ಮಜಾ

ಚಿತ್ರವರದಿ: ಗುಲಾಬಚಂದ ಆರ್ ಜಾಧವಆಲಮಟ್ಟಿ : ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದು ಮಕ್ಕಳ ಆ ನಿಟ್ಟಿನಲ್ಲಿ ಕಠಿಣ…

ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ: ಗದಗ ಜಿಲ್ಲೆಯ ಕೃಷಿ ಪರಿಕರ ಮಾರಾಟ ಮಳಿಗೆಗಳ ಪರವಾನಿಗೆ ಅಮಾನತು

ಕೃಷಿ ಪರಿಕರಗಳ ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗಿ ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರ ಮಾರಾಟ ಮಾಡಿರುವುದು ದೃಢಪಟ್ಟಿರುತ್ತದೆ.

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.