ಕೊಪ್ಪಳ:ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಕೊಪ್ಪಳ ಜಿಲ್ಲೆಯ ಇಬ್ಬರನ್ನು ಇಂದು ಜಿಲ್ಲಾ ಆಸ್ಪತ್ರೆಯಿಂದ ಆರೋಗ್ಯ ಇಲಾಖೆಯ ತಂಡದಿಂದ ಚಪ್ಪಾಳೆ ತಟ್ಟುವುದರ ಮೂಲಕ ಬಿಳ್ಕೊಡಲಾಯಿತು.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಎಸ್.ಬಿ ದಾನರೆಡ್ಡಿ, ಮಾತನಾಡಿ ಪಿ-1174 ಎಂಬ 20 ವರ್ಷದ ಮಹಿಳೆ ಹೊರ ರಾಜ್ಯವಾದ ಮಹಾರಾಷ್ಟ್ರದಿಂದ ಹಾಗೂ ಪಿ-1175 ಕೇಸ್ 25 ವರ್ಷದ ಪುರುಷ ಚೆನ್ನೈನಿಂದ ಜಿಲ್ಲೆಗೆ ಆಗಮಿಸಿದ ಕಾರಣ ಇವರಿಬ್ಬರನ್ನು ಕ್ವಾರಂಟೈನ್‌ಗೆ ಒಳಪಡಿಸಿ ಮೇ.15 ರಂದು ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ಸೊಂಕು ದೃಡಪಟ್ಟಿತ್ತು. ಇವರಿಗೆ 14 ದಿನಗಳ ಕಾಲ ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಮೇ.27 ರಂದು ಮತ್ತೊಮ್ಮೆ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರ ವರದಿ ನೆಗೆಟಿವ್ ಬಂದಿದ್ದು ಅವರನ್ನು ಬಿಡುಗಡೆ ಮಾಡಲಾಯಿತು ಎಂದರು.
ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ್ ಇಟಗಿ, ಡಾ.ಉಮೇಶ್ ರಾಜು ಹಾಗೂ ಜಿಲ್ಲಾ ಆಸ್ಪತ್ರೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

1 comment
  1. ಕೋರೊನಾ ವಾರಿಯರ್ಸ್ ವೈದ್ಯಕೀಯ ಸಿಬ್ಬಂದಿಗಳಿಗೆ ಅನಂತ ಧನ್ಯವಾದಗಳು

Leave a Reply

Your email address will not be published. Required fields are marked *

You May Also Like

ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ. ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಹೇಳಿದರು.

ವಚನ ಸಾಹಿತ್ಯಕ್ಕಾಗಿ ಬೆಂದ ಜೀವ ಹಳಕಟ್ಟಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅಭಿಮತ

ಸಚಿತ್ರ ವರದಿ ಗುಲಾಬಚಂದ ಜಾಧವಆಲಮಟ್ಟಿ : ವಚನ ಸಾರ ಜಗತ್ತಿನಾದ್ಯಂತ ಫಸರಿಸಿದ ಡಾ.ಫ.ಗು.ಹಳಕಟ್ಟಿ ವಚನ ಸಾಹಿತ್ಯದ…

ಕೊರೊನಾ ರೋಗಿಗಳಲ್ಲಿ ಕುಸಿಯುತ್ತಿದೆ ಆಮ್ಲಜನಕ – ಹೆಚ್ಚಿದ ಐಸಿಯು ಬೇಡಿಕೆ!

ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ)…