ಬೆಂಗಳೂರು: ತ್ರಿವಳಿ ತಲಾಖ್, 370ವಿಧಿ ರದ್ದು, ಪೌರತ್ವ ತಿದ್ದುಪಡಿ, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ವೇದಿಕೆ, ಸುಧಾರಣಾ ಕ್ರಮಗಳೂ ಸೇರಿದಂತೆ ಅನೇಕ ವಿಕ್ರಮಗಳನ್ನು ಸಾಧಿಸಲಾಗಿದೆ. ಕೋವಿಡ್19 ಬಿಕ್ಕಟ್ಟನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ಮೋದಿಯವರು ಭಾರತದ ವರ್ಚಸ್ಸನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ.
ಎನ್‍.ಡಿ.ಎ. ಸರ್ಕಾರ ಎರಡನೇ ಅವಧಿಯ ಮೊದಲನೇ ವರ್ಷ ಪೂರೈಸಿರುವ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಯಡಿಯೂರಪ್ಪ, 2ನೆಯ ಅವಧಿಯ ಮೋದಿ ಸರ್ಕಾರ 1 ವರ್ಷ ಯಶಸ್ವಿಯಾಗಿ ಪೂರೈಸಿದ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅವರ ಸಂಪುಟ ಸಹೋದ್ಯೋಗಿಗಳಿಗೆ ಅಭಿನಂದನೆಗಳು. ಅಭೂತಪೂರ್ವ ಜನಾದೇಶದೊಂದಿಗೆ, ‘ದೇಶ ಮೊದಲು’ ಎನ್ನುವ ಬದ್ಧತೆಯಿಂದ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರ, ತನ್ನ ಸಾಮರ್ಥ್ಯ, ಸಾಧನೆಗಳಿಂದ ಎಲ್ಲರ ವಿಶ್ವಾಸಗಳಿಸುತ್ತಾ ಮುನ್ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಮೀನು ವಿವಾದ ಕೊಲೆಯಲ್ಲಿ ಅಂತ್ಯ.

ಜಮೀನು ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೆರಿ ಜಿಲ್ಲೆಯಲ್ಲಿ ನಡೆದಿದೆ.

ಕೊರೋನಾ ಕಾವ್ಯ-2

ಶಿಕ್ಷಕಿ ಶಿಲ್ಪಾ ಮ್ಯಾಗೇರಿ. ಹವ್ಯಾಸ ಬರಹದ ಮೂಲಕ ಕಾವ್ಯ ಕಟ್ಟುವ ಕಸೂತಿಯನ್ನು ಕರಗತ ಮಾಡಿಕೊಂಡ ಶಿಕ್ಷಕಿ ಶಿಲ್ಪಾ ಎಮ್.ಎ, ಬಿಇಡಿ ಪದವಿ ಪಡೆದಿದ್ದಾರೆ. ಇವರು ಭಾರತಾಂಬೆ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶ ಪಡೆದರು. ಮಾತು ಮೌನದ ನಡುವೆ ಕವನ ಸಂಕಲನ ಹಾಗೂ ಆಕಾಶಕ್ಕೊಂದು ಏಣಿ ಚುಟುಕು ಸಂಕಲನ ಇವರ ಇನ್ನೆರಡು ಸಂಕಲನಗಳು. ಬೆಳಗಾವಿಯ ಹೊಂಬೆಳಕು ಸಾಂಸ್ಕೃತಿಕ ಸಂಘ ನೀಡುವ ರಾಷ್ಟ್ರ ಕೂಟ ಸಾಹಿತ್ಯಶ್ರೀ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ದೇಶದಲ್ಲಿ 70 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!

ನವದೆಹಲಿ : ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಎಂದಿನಂತೆ ಕಾಯ್ದುಕೊಂಡಿದೆ. ಆದರೆ ಕಳೆದ 24 ಗಂಟೆಗಳಲ್ಲಿ ವೈರಸ್ ನ ಸಂಖ್ಯೆಗಿಂತಲೂ ಚೇತರಿಕೆ ಪ್ರಮಾಣ ಹೆಚ್ಚಾಗಿದೆ.

ಗದಗ ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್! : 200 ಗಡಿ ಸಮೀಪಿಸುತ್ತಿದೆ ಸೋಂಕಿತರ ಸಂಖ್ಯೆ

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.