ಬೆಂಗಳೂರು:ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ. ಆದ್ದರಿಂದ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಅಧಿಕೃತ ಆದೇಶ ಸರ್ಕಾರದಿಂದ ಹೊರಬಿದ್ದಿದೆ. ಇದರಿಂದ ವಿಕೇಂಡ್ ನಲ್ಲಿ ಮನೆಯಲ್ಲೆ ಇರಬೇಕಾ ಎಂದು ಗೊಣಗಿಕೊಂಡವರಿಗೆ ಸರ್ಕಾರದ ಈ ನಿರ್ಧಾರ ಕೊಂಚ ರಿಲ್ಯಾಕ್ಸ್ ಮೂಡಿಸಿದೆ.
ಲಾಕ್‌ಡೌನ್‌ 4.0 ದಲ್ಲಿ ರಾಜ್ಯದಲ್ಲಿ ಪ್ರತಿ ಭಾನುವಾರದಂದು ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಲಾಕ್‌ಡೌನ್‌ 4.0 ದಲ್ಲಿ ಭಾನುವಾರ ಮಾತ್ರ ಲಾಕ್ಡೌನ್‌ 1 ಮತ್ತು 2 ರ ನಿಯಮಗಳನ್ನು ಹೇರಲಾಗಿತ್ತು. ಅದರಂತೆ ಅಗತ್ಯ ವಸ್ತುಗಳ ಹೊರತುಪಡಿಸಿ ಉಳಿದ ಇನ್ನೆಲ್ಲಾ ವ್ಯಾಪಾರ ವಹಿವಾಟುಗಳನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಬೇರೆ ದಿನಗಳಲ್ಲಿ ಇರುವಂತೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಇರುವ ನಿಬಂಧನೆಗಳೇ ಭಾನುವಾರಕ್ಕೂ ಅನ್ವಯವಾಗಲಿದೆ.

Leave a Reply

Your email address will not be published. Required fields are marked *

You May Also Like

ವಿದ್ಯುತ್ ಬಿಲ್ ಏರಿಸಿ ಗ್ರಾಹಕರಿಗೆ ಶಾಕ್ ನೀಡಿದ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

ಯಲಹಂಕ ಮೇಲ್ಸೇತುವೆ ಸಾವರ್ಕರ್ ಹೆಸರು: ವಿಪಕ್ಷಗಳ ವಿರೋಧ

ಯಲಹಂಕ ಮೇಲ್ಸೇತುವೆಗೆ ವಿನಾಯಕ ದಾಮೋದರ ಸಾವರ್ಕರ್ ಹೆಸರಿಡಲು ನಿರ್ಧರಿಸಲಾಗಿದೆ. ಆದರೆ, ಇದು ವಿಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮಾ.31ರ ವರೆಗೆ ವಿಸ್ತರಣೆ

ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.