ಬೆಳಗಾವಿ:  ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋದವರು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಮಾಡಲು ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು ದಿನದಿಂದ ದಿನಕ್ಕೆ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಹೆಚ್ಚಾಗುತ್ತಿದೆ. ಸರ್ಕಾರದಲ್ಲಿ ವಲಸಿಗರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೂಲ ಬಿಜೆಪಿ ಶಾಸಕರು ಅಸಮಾಧನಗೊಂಡಿದ್ದಾರೆ. ಇದು ಬಿಜೆಪಿ ಆಂತರಿಕ ವಿಚಾರವಾಗಿದ್ದು ಎಲ್ಲಿಗೆ ಹೋಗಿ ನಿಲ್ಲಲಿದೆ ಎಂದು ಕಾದು ನೋಡಬೇಕು ಎಂದರು.

ಬಿಜೆಪಿಯಲ್ಲಿ ಮೂರು ಬಣ

ಬಿಜೆಪಿ ಪಕ್ಷದಲ್ಲಿ ಒಟ್ಟು ಮೂರು ಬಣಗಳು ಇವೆ. ಕಾಂಗ್ರೆಸ್​​ನಿಂದ ಬಿಜೆಪಿಗೆ ಹೋಗಿರುವವರ ಒಂದು ಗುಂಪು. ಸಂಘ ಪರಿವಾರದಿಂದ ಬಂದಿರುವ ಬಿಜೆಪಿ ಶಾಸಕರದ್ದು ಮತ್ತೊಂದು ಗುಂಪು, ಹಾಗೂ ಜನತಾ ಪರಿವಾರದಿಂದ ಬಿಜೆಪಿಗೆ ಹೋಗಿರುವ ಶಾಸಕರ ಇನ್ನೊಂದು ಗುಂಪು ಇದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಇನ್ನೂ 5 ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡಿತ್ತೇನೆ ಎಂದ ಹೇಳಿಕೆಗೆ ಪ್ರತಿಕ್ರಿಯಿಸಿ ಕಾಂಗ್ರೆಸ್​ನಿಂದ ಯಾರೊಬ್ಬರೂ ಬಿಜೆಪಿಗೆ ಹೋಗಲ್ಲ. ಈಗ ಎಲ್ಲ ಸಚಿವ ಸ್ಥಾನಗಳು ಭರ್ತಿಯಾಗಿದ್ದು, ಬಂದವರಿಗೆ ಏನ್ ಕೊಡ್ತಾರೆ? ಕೇವಲ ಶಾಸಕರಾಗಿ ಉಳಿಯೋಕೆ ಬಿಜೆಪಿಗೆ ಏಕೆ ಹೋಗಬೇಕು ಎಂದು ಟಾಂಗ್‌ ಕೊಟ್ಟಿದ್ದಾರೆ. ಕಾಂಗ್ರೆಸ್​ನಿಂದ ಯಾವುದೇ ಆಪರೇಷನ್ ನಡೆಸಲ್ಲ. ದುಡ್ಡು ಕೊಟ್ಟು ಶಾಸಕರನ್ನು ಖರೀದಿ ಮಾಡುವಷ್ಟು ಬ್ಯಾಂಕ್ ಬ್ಯಾಲೆನ್ಸ್ ನಮ್ಮ ಬಳಿ ಇಲ್ಲ ಎಂದು ವ್ಯಂಗ್ಯ ಮಾಡಿದರು.

Leave a Reply

Your email address will not be published. Required fields are marked *

You May Also Like

ಯಪ್ಪಾ..!, ಗಂಡ ತನ್ನ ಜೊತಿ ಜಗಳಾ ಆಡಂಗಿಲ್ಲಾ ಅಂತ ಡಿವೋರ್ಸ್ ಕೇಳ್ಯಾಳಂತ!

ಗಂಡ-ಹೆಂಡರ ಜಗಳ ಗಂಧ ತೀಡಿದಂಗ ಅಂತಾರ. ಅಷ್ಟ ಯಾಕ, ಗಂಡ-ಹೆಂಡರ ಜಗಳ ಉಂಡು ಮಲಗೋ ತನಕ ಅಂತಾನೂ ಅಂತಾರ. ಆದ್ರ ಗಂಡ ತನ್ನ ಜೊತಿಗೆ ಜಗಳಾನ ಆಡವಲ್ಲಾ, ತನಗ ಭಾಳ್ ಪ್ರೀತಿ ಮಾಡ್ತಾನಾ ಅಂತ ಹೆಣ್ಮಗಳ ಒಬ್ಬಾಕಿ ಕೋರ್ಟ್ ಕಟ್ಟಿ ಹತ್ತಿದ ಕತಿ ಇದು..

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

ಪಕ್ಷೇತರ ಅಬ್ಯರ್ಥಿಗೆ ಸಿಪಿಐಎಂ ಬೆಂಬಲ

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರನ್ನು ಸಿಪಿಐಎಂ ಪಕ್ಷ ಬೆಂಬಲಿಸಲಿದೆ ಎಂದು ಸಿಪಿಐಎಂ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ತಿಳಿಸಿದರು.

‘ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ, ನೇಪಾಳಿ’ : ನೇಪಾಳ ಪ್ರಧಾನಿ ಕಿಡಿ

‘ನಿಜವಾದ ಅಯೋಧ್ಯೆ ಇರುವುದು ಭಾರತದಲ್ಲಲ್ಲ ನೇಪಾಳದಲ್ಲಿ. ದೇವರು ರಾಮ ಭಾರತೀಯನಲ್ಲ, ನೇಪಾಳಿ’ ಎಂದು ನೇಪಾಳ ಪ್ರಧಾನಿ ಪ್ರತಿಪಾದಿಸಿದ್ದಾರೆ.