ಬೆಳಗಾವಿ:  ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋದವರು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಮಾಡಲು ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು ದಿನದಿಂದ ದಿನಕ್ಕೆ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಹೆಚ್ಚಾಗುತ್ತಿದೆ. ಸರ್ಕಾರದಲ್ಲಿ ವಲಸಿಗರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೂಲ ಬಿಜೆಪಿ ಶಾಸಕರು ಅಸಮಾಧನಗೊಂಡಿದ್ದಾರೆ. ಇದು ಬಿಜೆಪಿ ಆಂತರಿಕ ವಿಚಾರವಾಗಿದ್ದು ಎಲ್ಲಿಗೆ ಹೋಗಿ ನಿಲ್ಲಲಿದೆ ಎಂದು ಕಾದು ನೋಡಬೇಕು ಎಂದರು.

ಬಿಜೆಪಿಯಲ್ಲಿ ಮೂರು ಬಣ

ಬಿಜೆಪಿ ಪಕ್ಷದಲ್ಲಿ ಒಟ್ಟು ಮೂರು ಬಣಗಳು ಇವೆ. ಕಾಂಗ್ರೆಸ್​​ನಿಂದ ಬಿಜೆಪಿಗೆ ಹೋಗಿರುವವರ ಒಂದು ಗುಂಪು. ಸಂಘ ಪರಿವಾರದಿಂದ ಬಂದಿರುವ ಬಿಜೆಪಿ ಶಾಸಕರದ್ದು ಮತ್ತೊಂದು ಗುಂಪು, ಹಾಗೂ ಜನತಾ ಪರಿವಾರದಿಂದ ಬಿಜೆಪಿಗೆ ಹೋಗಿರುವ ಶಾಸಕರ ಇನ್ನೊಂದು ಗುಂಪು ಇದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಇನ್ನೂ 5 ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡಿತ್ತೇನೆ ಎಂದ ಹೇಳಿಕೆಗೆ ಪ್ರತಿಕ್ರಿಯಿಸಿ ಕಾಂಗ್ರೆಸ್​ನಿಂದ ಯಾರೊಬ್ಬರೂ ಬಿಜೆಪಿಗೆ ಹೋಗಲ್ಲ. ಈಗ ಎಲ್ಲ ಸಚಿವ ಸ್ಥಾನಗಳು ಭರ್ತಿಯಾಗಿದ್ದು, ಬಂದವರಿಗೆ ಏನ್ ಕೊಡ್ತಾರೆ? ಕೇವಲ ಶಾಸಕರಾಗಿ ಉಳಿಯೋಕೆ ಬಿಜೆಪಿಗೆ ಏಕೆ ಹೋಗಬೇಕು ಎಂದು ಟಾಂಗ್‌ ಕೊಟ್ಟಿದ್ದಾರೆ. ಕಾಂಗ್ರೆಸ್​ನಿಂದ ಯಾವುದೇ ಆಪರೇಷನ್ ನಡೆಸಲ್ಲ. ದುಡ್ಡು ಕೊಟ್ಟು ಶಾಸಕರನ್ನು ಖರೀದಿ ಮಾಡುವಷ್ಟು ಬ್ಯಾಂಕ್ ಬ್ಯಾಲೆನ್ಸ್ ನಮ್ಮ ಬಳಿ ಇಲ್ಲ ಎಂದು ವ್ಯಂಗ್ಯ ಮಾಡಿದರು.

Leave a Reply

Your email address will not be published. Required fields are marked *

You May Also Like

ದುಷ್ಕರ್ಮಿಗಳ ದುಷ್ಕೃತ್ಯಕ್ಕೆ ಕೈಸೇರಬೇಕಿದ್ದ ಲಕ್ಷಾಂತರ ಆದಾಯದ ಬೆಳೆ ನಾಶ ನಾಶ!

ರೈತರಿಗೆ ಭೂತಾಯಿಯೇ ಎಲ್ಲವೂ. ಆದರೆ ಭೂತಾಯಿಯನ್ನು ನಂಬಿ ಇನ್ನೇನು ಮೆಣಸಿನಕಾಯಿ, ಈರುಳ್ಳಿ ಬೆಳೆ ಕೈಸೇರುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದ ಅನ್ನದಾತನಿಗೆ ಬುಧುವಾರದ ಬೆಳಕು ಆಘಾತದ ಸುದ್ದಿಯನ್ನು ಹೊತ್ತು ತಂದಿತ್ತು.

ಫಾರ್ಮ್ ಹೌಸ್ ನಲ್ಲಿಯೇ ಗಾನ ಗಾರುಡಿಗನ ಅಂತಿಮ ಸಂಸ್ಕಾರ – ಸಾರ್ವಜನಿಕರಿಂದ ವೀಕ್ಷಣೆ!

ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣಂ ಅವರ ಅಂತ್ಯ ಸಂಸ್ಕಾರ ಇಂದು ಚೆನ್ನೈನ ರೆಡ್‍ ಹಿಲ್ ಫಾರ್ಮ್ ಹೌಸ್ ನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ

ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಮಹಾರಾಷ್ಟ್ರಕ್ಕೆ ಖಡಕ್ ಸಂದೇಶ ರವಾನಿಸಿದ ಲಕ್ಷ್ಮಣ್ ಸವದಿ!

ಬೆಳಗಾವಿ : ಡಿಸಿಎಂ ಲಕ್ಷ್ಮಣ ಸವದಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ತಿರುಗೇಟು ನೀಡಿ, ವಾಗ್ದಾಳಿ ನಡೆಸಿದ್ದಾರೆ.