ದೆಹಲಿ: ಈ ತಿಂಗಳ ಆರಂಭದಲ್ಲಿ ಲಡಾಕ್ ನಲ್ಲಿ ಭಾರತ ಮತ್ತು ಚೀನ ಮಿಲಿಟರಿ ಮುಖಾಮುಖಿಯಾದ ಹಿನ್ನೆಲೆ ಮತ್ತು ಚೀನಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ನಿಖರವಾಗಿ ಏನು ನಡೆಯುತ್ತಿದೆ ಎಂದು ದೇಶಕ್ಕೆ ತಿಳಿಸಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ದೇಶದಲ್ಲಿ 1.6 ಲಕ್ಷಕ್ಕೂ ಹೆಚ್ಚು ಜನರಿಗೆ ತಗುಲಿರುವ ಕೊರೋನವೈರಸ್ ಸೋಂಕಿನ ವಿರುದ್ಧ ಭಾರತವು ಹೋರಾಡುತ್ತಿರುವಾಗ ಈ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರಂತರ ಮೌನ ಬೃಹತ್ ಊಹಾಪೋಹ ಮತ್ತು ಅನಿಶ್ಚಿತತೆಗೆ ಕಾರಣವಾಗಿದೆ ಎಂದು ರಾಹುಲ್ ಹೇಳಿದ್ದಾರೆ. ಲಡಾಕ್ ನ ಪರಿಸ್ಥಿತಿ ಮತ್ತು ಚೀನಾದೊಂದಿಗಿನ ಉದ್ವಿಗ್ನತೆಯನ್ನು ಗಂಭೀರ ರಾಷ್ಟ್ರೀಯ ಕಾಳಜಿಯಾಗಿ ಪರಿಗಣಿಸಿ ಎಂದು ಕಾಂಗ್ರೆಸ್ ಹೇಳಿದೆ.
ಚೀನಾದೊಂದಿಗಿನ ಗಡಿ ಪರಿಸ್ಥಿತಿಯ ಬಗ್ಗೆ ಸರ್ಕಾರದ ಮೌನವು ಬಿಕ್ಕಟ್ಟಿನ ಸಮಯದಲ್ಲಿ ಭಾರಿ ಊಹಾಪೋಹಗಳಿಗೆ ಮತ್ತು ಅನಿಶ್ಚಿತತೆಗೆ ಉತ್ತೇಜನ ನೀಡುತ್ತಿದೆ. ಕೇಂದ್ರ ಸರ್ಕಾರ ಏನಾಗುತ್ತಿದೆ ಎಂಬುದನ್ನು ದೇಶಕ್ಕೆ ನಿಖರವಾಗಿ ಹೇಳಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಮೇ 5 ಮತ್ತು 6 ರಂದು ಲಡಾಕ್ ನ ಪಾಂಗೊಂಗ್ ಸರೋವರ ಪ್ರದೇಶದಲ್ಲಿ ಉಭಯ ರಾಷ್ಟ್ರಗಳ ಸೈನಿಕರ ನಡುವೆ ನಡೆದ ಮಾತಿನ ಚಕಮಕಿಯಲ್ಲಿ ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆ ಹೆಚ್ಚಾಗಿದ್ದು, ಇದರಲ್ಲಿ ಹಲವಾರು ಭಾರತೀಯ ಸೈನಿಕರು ಗಾಯಗೊಂಡಿದ್ದಾರೆ ಎನ್ನಲಾಗಿತ್ತು.
ಅಂದಿನಿಂದ, ಚೀನಾದ ಸೈನ್ಯದ ಆಕ್ರಮಣಗಳ ಬಗ್ಗೆ ಅನೇಕ ವರದಿಗಳು ಬಂದಿವೆ, ಚೀನಾ ಸೈನಿಕರನ್ನು ಪಂಗೊಂಗ್ ಸರೋವರದ ಮೋಟಾರು ದೋಣಿಗಳಲ್ಲಿ ಗುರುತಿಸಲಾಗಿದೆ. ಚೀನೀ ಹೆಲಿಕಾಪ್ಟರ್ ಗಳು ಸಹ ಈ ಪ್ರದೇಶದಲ್ಲಿ ಕಂಡುಬಂದಿವೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ನಡೆಯುವ ಗ್ರಾಪಂ ಚುನಾವಣೆ ವಿವರ

ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿನ ಒಟ್ಟು 6004 ಗ್ರಾಮ ಪಂಚಾಯತಿಗಳಲ್ಲಿ ಅವಧಿ ಮುಕ್ತಾಯವಾಗದ 162 ಗ್ರಾಮ ಪಂಚಾಯತಿಗಳು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ 6 ಗ್ರಾಮ ಪಂಚಾಯತಿಗಳು ಮತ್ತು 33 ಗ್ರಾಮ ಪಂಚಾಯತಿಗಳು ಪೂರ್ಣವಾಗಿ ಹಾಗೂ 41 ಗ್ರಾಮ ಪಂಚಾಯತಿಗಳು ಬಹುಶಃ ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವುದರಿಂದ ಒಟ್ಟು 74 ಗ್ರಾಮ ಪಂಚಾಯತಿಗಳು ಒಟ್ಟಾರೆ 242 ಗ್ರಾಮ ಪಂಚಾಯತಿಗಳನ್ನು ಹೊರತು ಪಡೆಸಿ ಉಳಿದ ಎಲ್ಲ 5762 ಗ್ರಾಮ ಪಂಚಾಯತಿಗಳ 35,884 ಕ್ಷೇತ್ರಗಳಿಂದ ಒಟ್ಟು 92121 ಸ್ಥಾನಗಳಿಗೆ ಈ ಕೆಳಕಂಡ ವೇಳಾ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು.

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ಗದಗನಲ್ಲಿಂದು 4 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಪಿ-7386(26 ವರ್ಷ), ಪಿ-7387(11ವರ್ಷ), ಪಿ-7388(3 ವರ್ಷ),…

ಧಾರವಾಡದ ಸೋಂಕಿತ ವ್ಯಕ್ತಿಯಿಂದ ವೈದ್ಯರಿಗೂ ಶುರುವಾಗಿದೆ ಸಂಕಷ್ಟ!

ಹೊಸಯಲ್ಲಾಪುರ ಬಳಿಯ ಕೋಳಿಕೆರೆ ಪ್ರದೇಶದಲ್ಲಿನ ವ್ಯಕ್ತಿಗೆ ಕೊರೊನಾ ಸೋಂಕು ನಿನ್ನೆ ಕಂಡು ಬಂದಿದ್ದು, ಜಿಲ್ಲಾಡಳಿತ ಆ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದೆ.