ಬೆಂಗಳೂರು:ಕಾಂಗ್ರೆಸ್ ಪಕ್ಷದ ಯಾವ ಶಾಸಕರು ರಾಜಿನಾಮೆ ನೀಡುವುದಿಲ್ಲ. ತಮ್ಮ ಪಕ್ಷದ ಹುಳುಕು ಮುಚ್ಚಿಕೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಬಿಜೆಪಿಗೆ ಮುಳುವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ನಿಡಿದ ಹೇಳಿಕೆ ಪ್ರತಿಕ್ರಿಸಿದ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಬೆಂಕಿ ಬಿದ್ದಿದೆ. ಯಡಿಯೂರಪ್ಪ ಬಗ್ಗೆ ಯತ್ನಾಲ್ ನೀಡಿದ ಹೇಳಿಕೆ ಅರ್ಥವೇನು? ಬಿಜೆಪಿಯ ಆಂತರಿಕ ಭಿನ್ನಮತದಲ್ಲಿ ಕಾಂಗ್ರೆಸ್ ಕೈ ಹಾಕುವುದಿಲ್ಲ. ಅವರ ಕಚ್ಚಾಟದಿಂದ ಸರ್ಕಾರ ಹೋದರೆ ನಾವು ಜವಾಬ್ದಾರರಲ್ಲ. ಇಂಥ ಕೆಟ್ಟ ಸರ್ಕಾರ ಎಂದೂ ಬಂದಿರಲಿಲ್ಲ ಎಂದು ಕಿಡಿಕಾರಿದರು.

ಉಮೇಶ್ ಕತ್ತಿಯವರು ನನ್ನನ್ನು ಭೇಟಿಯಾಗಲು ಪ್ರಯತ್ನ ಮಾಡಿದರು ಎಂಬುದು ಊಹಾಪೋಹ. ಅವರು ನನ್ನ ಸ್ನೇಹಿತರು. ನನ್ನ ಮತ್ತು ಅವರ ಮಧ್ಯೆ ಗೆಳೆತನ, ವಿಶ್ವಾಸ ಇದೆ. ಆದರೆ ಅವರು ನನ್ನನ್ನು ಭೇಟಿಯಾಗುವ ಪ್ರಯತ್ನ ಮಾಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

You May Also Like

ನಿಡಗುಂದಿ: ಚರಕ ಕ್ಲಿನಿಕ್ ಉದ್ಘಾಟನಾ ಸಮಾರಂಭ ವೈದ್ಯ ವೃತ್ತಿ ವ್ಯಾಪಾರೀಕರಣದತ್ತ ಶಾಸಕ ಶಿವಾನಂದ ಪಾಟೀಲ ವಿಷಾಧ

ವರದಿ : ಗುಲಾಬಚಂದ ಜಾಧವನಿಡಗುಂದಿ : ವೈದ್ಯ ವೃತ್ತಿ ಅತ್ಯಂತ ಪವಿತ್ರ. ಎಲ್ಲ ವೃತ್ತಿಗಳಲ್ಲೇ ಶ್ರೇಷ್ಠ.…

ಪಾಕ್‍ನಲ್ಲಿ ಬಸ್-ರೈಲು ಢಿಕ್ಕಿ 19 ಸಿಖ್ ಯಾತ್ರಾರ್ಥಿಗಳ ಸಾವು

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು…

ಸಚಿವ ಸಿ ಸಿ ಪಿ ಕ್ಷಮೆ ಯಾಚಿಸಲಿ: ಅರಬರ್

ಉತ್ತರಪ್ರಭ ಸುದ್ದಿ ಗದಗ: ಮೆಣಿಸಗಿ ಗ್ರಾಮದಲ್ಲಿ ಹರಿಜನ ಗಿರಿಜನ ಅಭಿವೃದ್ಧಿ ವಿವಿಧ ಕಾಮಗಾರಿ ಚಾಲನೆ ನೀಡಿ…

ಕಾರ್ಮಿಕರ ಮುಷ್ಕರ ಹಿನ್ನೆಲೆ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.