ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.

ಇಳಕಲ್ ನಿಂದ ಹುಬ್ಬಳ್ಳಿಗೆ ಬರುವಾಗ ಕುಳಗೇರಿ ಕ್ರಾಸ್ ನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕರೊಬ್ಬರು ರೂ. 10 ಸಾವಿರ ಇದ್ದ ಪರ್ಸನ್ನು ಬಸ್ ನಲ್ಲಿಯೇ ಬಿಟ್ಟು ಹೋಗಿದ್ದರು. ಇದನ್ನು ಮರಳಿ ಮಾಲೀಕರಿಗೆ ತಲುಪಿಸಿ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಲಾಕ್ಡೌನ್ ಹಿನ್ನೆಲೆಯಲ್ಲಿ ಮಾರ್ಗದರ್ಶಿ ಸೂಚನೆಗಳ ಪ್ರಕಾರ ಬಸ್ನೆಲ್ಲಿ ಪ್ರಯಾಣಿಸುವವರು ಹೆಸರು, ದೂರವಾಣಿ ಸಂಖ್ಯೆ ಹಾಗೂ ಪ್ರಯಾಣದ ಸ್ಥಳಗಳನ್ನು ನಮೂದಿಸುವುದು ಕಡ್ಡಾಯವಾಗಿದೆ. ಇದೇ ಮಾಹಿತಿ ಆಧಾರದ ಮೇಲೆ ಬಸ್ ಚಾಲಕ ಆರ್.ಎನ್.ಮಾಳವಾಡ ಮತ್ತು ನಿರ್ವಾಹಕ ಆರ್.ಡಿ.ದೇಗಾಂವಕರ್ ಕಳೆದುಕೊಂಡವರ ಹಣ ತಲುಪಿಸಿದ್ದಾರೆ.

ದೂರವಾಣಿ ಮೂಲಕ ಅವರನ್ನು ಸಂಪರ್ಕಿಸಿ ಘಟಕಕ್ಕೆ ಕರೆಸಿಕೊಂಡು ಮೇಲಾಧಿಕಾರಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಸಿ, ಖಚಿತಪಡಿಸಿಕೊಂಡು ಹಣವಿದ್ದ ಪರ್ಸ್ ನ್ನು ಹಸ್ತಾಂತರಿಸಿದ್ದಾರೆ.

Exit mobile version