ಮಸ್ಕಿ: ಪಟ್ಟಣದ ಪುರಸಭೆ ಸದಸ್ಯರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಮಾಸಂಗಿಪುರದ ನಾಗರಿಕರಲ್ಲಿ ಆತಂಕ ಮನೆಮಾಡಿದೆ.

ಈ ಹಿಂದೆ ಬ್ಯಾಂಕ್ ಉದ್ಯೋಗಿ ಒಬ್ಬರಿಗೆ ಕೋವಿಡ್-19 ದೃಢ ಪಟ್ಟಿತ್ತು. ಅವರ ಜೊತೆ ಪುರಸಭೆ ಸದಸ್ಯ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪುರಸಭೆ ಸದಸ್ಯನಿಗೂ ಕೊರೊನಾ ಪ್ರಕರಣ ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ರಾಯಚೂರಿನ ಐಸೋಲೇಷನ್ ಗೆ ಕಳುಹಿಸಲಾಗಿದೆ.

ಪುರಸಭೆ ಸದಸ್ಯ ವಾಸಿಸುವ ಬಡಾವಣೆ ಸುತ್ತಮುತ್ತ ಪೊಲೀಸರು ಸಂಪೂರ್ಣ ಸೀಲ್ ಡೌನ್ ಮಾಡಿದರು. ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಸಿಪಿಐ ದೀಪಕ್ ಬೂಸರೆಡ್ಡಿ, ಪಿ ಎಸ್ ಐ ಸಣ್ಣ ಈರೇಶ,  ಪುರಸಭೆ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ, ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಕೋವಿಡ್-19 ಹರಡದಂತೆ ಮುಂಜಾಗೃತ ಕ್ರಮ ತೆಗೆದುಕೊಳ್ಳವುದರ ಬಗ್ಗೆ ಚರ್ಚಿಸಿದರು.

ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕ ಇರುವ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಕ್ವಾರೆಂಟೈನ್ ಮಾಡಿ ಕೊರೊನಾ ಹರಡದಂತೆ ತಾಲೂಕ ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ವೃತ್ತಕ್ಕೆ ದಿ. ಆರ್.ಎನ್.ದೇಶಪಾಂಡೆ ನಾಮಕರಣಕ್ಕೆ ಮನವಿ

ಮುಳಗುಂದ: ಪಟ್ಟಣದ ಹೃದಯ ಭಾಗದ ಗಾಂಧಿಕಟ್ಟಿಯ ಹತ್ತಿರ ವೃತ್ತ ಪ.ಪಂ ಮಾಜಿ ಸದಸ್ಯ ದಿ.ಆರ್.ಎನ್ ದೇಶಪಾಂಡೆ ಅವರ ಹೆಸರು ನಾಮಕರಣ ಮಡಬೇಕು. ಎಂದು ಉನ್ನತಿ ಮಹಿಳಾ ಸಮಾಜ ಸೇವೆ ಹಾಗೂ ವಿವಿದೋದ್ದೇಶಗಳ ಸಂಘ, ಜೈ ಮಾತಾ ಜೀಜಾಬಾಯಿ ಕ್ಷತ್ರೀಯ ಮರಾಠ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ.ಪಂ.ಮುಖ್ಯಾಧಿಕಾರಿ ಎಂಎಸ್.ಬೆಂತೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಮಕ್ಕಳಲ್ಲಿ ಕಲೆಗಳ ವ್ಯಾಮೋಹ ಮೂಡಿಸಿ: ಉಮೇಶ್ ಶಿರಹಟ್ಟಿಮಠ

ಉತ್ತರಪ್ರಭ ನಿಡಗುಂದಿ: ಪ್ರತಿಯೊಬ್ಬ ಮಗುವಿನಲ್ಲಿ ಒಂದಿಲ್ಲೊಂದು ರೀತಿಯ ಕಲಾ ಪ್ರತಿಭೆ ಹುದುಗಿರುತ್ತದೆ. ಅಂಥ ಪ್ರತಿಭೆಗಳನ್ನು ಗುರುತಿಸಿ…

ಬೆಂಗಳೂರು ಗಲಭೆ ಪ್ರಕರಣ – ಮಾಜಿ ಮೇಯರ್ ಪತ್ತೆಗಾಗಿ ವಿಶೇಷ ತಂಡ ರಚನೆ!

ಬೆಂಗಳೂರು : ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಭೆಯ ಪ್ರಮುಖ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ಅವರ ಪತ್ತೆಗಾಗಿ ಸಿಸಿಬಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಸಾಲದ ಕೂಪಕ್ಕೆ ಸಿಲುಕಿದ್ದ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ!

ಹಾವೇರಿ : ಸಾಲದಿಂದ ನರಳಿದ್ದ ಒಂದೇ ಗ್ರಾಮದ ಇಬ್ಬರು ರೈತರು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.