ಮಸ್ಕಿ: ಪಟ್ಟಣದ ಪುರಸಭೆ ಸದಸ್ಯರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಮಾಸಂಗಿಪುರದ ನಾಗರಿಕರಲ್ಲಿ ಆತಂಕ ಮನೆಮಾಡಿದೆ.

ಈ ಹಿಂದೆ ಬ್ಯಾಂಕ್ ಉದ್ಯೋಗಿ ಒಬ್ಬರಿಗೆ ಕೋವಿಡ್-19 ದೃಢ ಪಟ್ಟಿತ್ತು. ಅವರ ಜೊತೆ ಪುರಸಭೆ ಸದಸ್ಯ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪುರಸಭೆ ಸದಸ್ಯನಿಗೂ ಕೊರೊನಾ ಪ್ರಕರಣ ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ರಾಯಚೂರಿನ ಐಸೋಲೇಷನ್ ಗೆ ಕಳುಹಿಸಲಾಗಿದೆ.

ಪುರಸಭೆ ಸದಸ್ಯ ವಾಸಿಸುವ ಬಡಾವಣೆ ಸುತ್ತಮುತ್ತ ಪೊಲೀಸರು ಸಂಪೂರ್ಣ ಸೀಲ್ ಡೌನ್ ಮಾಡಿದರು. ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಸಿಪಿಐ ದೀಪಕ್ ಬೂಸರೆಡ್ಡಿ, ಪಿ ಎಸ್ ಐ ಸಣ್ಣ ಈರೇಶ,  ಪುರಸಭೆ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ, ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಕೋವಿಡ್-19 ಹರಡದಂತೆ ಮುಂಜಾಗೃತ ಕ್ರಮ ತೆಗೆದುಕೊಳ್ಳವುದರ ಬಗ್ಗೆ ಚರ್ಚಿಸಿದರು.

ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕ ಇರುವ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಕ್ವಾರೆಂಟೈನ್ ಮಾಡಿ ಕೊರೊನಾ ಹರಡದಂತೆ ತಾಲೂಕ ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಜನರಿಗೆ ಕೊಂಚ ನೆಮ್ಮದಿ

ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !

ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.

ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಖರ್ಗೆ ಫಿಕ್ಸ್..!

ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.