ತಿರುಮಲ: ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಈ ಹಿನ್ನೆಲೆಯಲ್ಲಿ ತಿರುಪತಿ ತಿರುಮಲನ ಭಕ್ತರು ಕೂಡ ದರ್ಶನಕ್ಕಾಗಿ ಹಾತೊರೆಯುತ್ತಿದ್ದಾರೆ. ಕಂಟೈನ್ ಮೆಂಟ್ ಪ್ರದೇಶಗಳ ಹೊರಗೆ ಎಲ್ಲ ರೀತಿಯ ನಿರ್ಬಂಧಗಳಲ್ಲಿ ಸಡಿಲಿಕೆ ಪ್ರಕಟಿಸಿರುವ ಹಿನ್ನಲೆಯಲ್ಲಿ ಜೂನ್ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾದಿಗಳಿಗೆ ಅನುಮತಿಸುವ ಅವಕಾಶವಿದೆ.

ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಿ ವಿಧಾನಗಳ ಬಗ್ಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಧಿಕಾರಿಗಳು ಕಸರತ್ತು ಪೂರ್ಣಗೊಳಿಸಿದ್ದಾರೆ. ಸೀಮಿತ ಸಂಖ್ಯೆಯಲ್ಲಿ ಭಕ್ತರಿಗೆ ದರ್ಶನಕ್ಕೆ ಅನುಮತಿ ನೀಡಲು ಏರ್ಪಾಟು ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

Leave a Reply

Your email address will not be published. Required fields are marked *

You May Also Like

ಶಾರ್ಪ್ ಶೂಟರ್ ವಿಚಾರಣೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು!

ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ಕೃತ್ಯಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ…

ಕೊರೊನಾಗೆ ಜಗತ್ತಿನಲ್ಲಿ ಇಲ್ಲಿಯವರೆಗೂ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ಜಗತ್ತಿನಲ್ಲಿ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇಲ್ಲಿಯವರೆಗೂ 2.33 ಲಕ್ಷ ಜನರು ಇದಕ್ಕೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ ಎಂದು ತಿಳಿದು ಬಂದಿದೆ.

ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ

ಶೇಂಗಾ ಚಿಕ್ಕಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಶೇಂಗಾ ಚಿಕ್ಕಿ ರುಚಿಯ ಜೊತೆಗೆ ಪೌಷ್ಟಿಕವೂ ಹೌದು. ಅಂತಹ ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ ದೊರೆತಿದೆ. ಏನಿದು ಐಜಿ ಮಾನ್ಯತೆ ಎಂದರೆ…??

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…