ತಿರುಮಲ: ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.
ಈ ಹಿನ್ನೆಲೆಯಲ್ಲಿ ತಿರುಪತಿ ತಿರುಮಲನ ಭಕ್ತರು ಕೂಡ ದರ್ಶನಕ್ಕಾಗಿ ಹಾತೊರೆಯುತ್ತಿದ್ದಾರೆ. ಕಂಟೈನ್ ಮೆಂಟ್ ಪ್ರದೇಶಗಳ ಹೊರಗೆ ಎಲ್ಲ ರೀತಿಯ ನಿರ್ಬಂಧಗಳಲ್ಲಿ ಸಡಿಲಿಕೆ ಪ್ರಕಟಿಸಿರುವ ಹಿನ್ನಲೆಯಲ್ಲಿ ಜೂನ್ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾದಿಗಳಿಗೆ ಅನುಮತಿಸುವ ಅವಕಾಶವಿದೆ.
ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಿ ವಿಧಾನಗಳ ಬಗ್ಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಧಿಕಾರಿಗಳು ಕಸರತ್ತು ಪೂರ್ಣಗೊಳಿಸಿದ್ದಾರೆ. ಸೀಮಿತ ಸಂಖ್ಯೆಯಲ್ಲಿ ಭಕ್ತರಿಗೆ ದರ್ಶನಕ್ಕೆ ಅನುಮತಿ ನೀಡಲು ಏರ್ಪಾಟು ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.