ತಿರುಮಲ: ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಈ ಹಿನ್ನೆಲೆಯಲ್ಲಿ ತಿರುಪತಿ ತಿರುಮಲನ ಭಕ್ತರು ಕೂಡ ದರ್ಶನಕ್ಕಾಗಿ ಹಾತೊರೆಯುತ್ತಿದ್ದಾರೆ. ಕಂಟೈನ್ ಮೆಂಟ್ ಪ್ರದೇಶಗಳ ಹೊರಗೆ ಎಲ್ಲ ರೀತಿಯ ನಿರ್ಬಂಧಗಳಲ್ಲಿ ಸಡಿಲಿಕೆ ಪ್ರಕಟಿಸಿರುವ ಹಿನ್ನಲೆಯಲ್ಲಿ ಜೂನ್ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾದಿಗಳಿಗೆ ಅನುಮತಿಸುವ ಅವಕಾಶವಿದೆ.

ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಿ ವಿಧಾನಗಳ ಬಗ್ಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಧಿಕಾರಿಗಳು ಕಸರತ್ತು ಪೂರ್ಣಗೊಳಿಸಿದ್ದಾರೆ. ಸೀಮಿತ ಸಂಖ್ಯೆಯಲ್ಲಿ ಭಕ್ತರಿಗೆ ದರ್ಶನಕ್ಕೆ ಅನುಮತಿ ನೀಡಲು ಏರ್ಪಾಟು ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

Leave a Reply

Your email address will not be published. Required fields are marked *

You May Also Like

ದೇಹ ಮಾರುವುದಕ್ಕಾಗಿ ಕರೆ ತಂದಿದ್ದ ಅಪ್ರಾಪ್ತೆಯರನ್ನು ರಕ್ಷಿಸಿದ ಪೊಲೀಸರು!

ಜೈಪುರ : ಅಪ್ರಾಪ್ತ ಬಾಲಕಿಯರನ್ನು ದೇಹ ವ್ಯಾಪಾರಕ್ಕೆಂದು ಕರೆ ತಂದಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ.

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…

ಋತುಚಕ್ರದ ಬಗ್ಗೆ ಬೋಲ್ಡ್ ಆಗಿ ಮಾತನಾಡಿದ ಮಾದಕ ನಟಿ!

ಬೆಂಗಳೂರು: ಆಗ ನನಗೆ 14 ವರ್ಷ ವಯಸ್ಸು. ಈ ವೇಳೆ ನಮ್ಮ ಮನೆಯಲ್ಲಿ ದೇವರ ಪೂಜೆ ನಡೆಯುತ್ತಿತ್ತು. ಆ ಪೂಜೆಯಲ್ಲಿ ನಾನು ಪಾಲ್ಗೊಂಡಿದ್ದೆ. ಆದರೆ ಆಗಲೇ ನನಗೆ ಪೀರಿಯಡ್ಸ್ ಆಯಿತು. ಆಗ ಅಮ್ಮ ನನ್ನ ಜೊತೆಯಲ್ಲಿ ಇರಲಿಲ್ಲ. ಆದ್ದರಿಂದ ನಾನು ನನ್ನ ಪಕ್ಕದಲ್ಲಿದ್ದ ಚಿಕ್ಕಮ್ಮನಿಗೆ ಈ ವಿಚಾರವನ್ನು ತಿಳಿಸಿದೆ. ನಾನು ಆ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ಕೂಡ ಧರಿಸಿರಲಿಲ್ಲ ಎಂದು ಅನೇಕ ವರ್ಷಗಳ ಹಿಂದೆ ನಡೆದಿದ್ದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.

ವಿಶಪ್ರಾಶನದಿಂದ 62 ಕುರಿಗಳ ಸಾವು

ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ…