ಬೆಂಗಳೂರು: ಆಗ ನನಗೆ 14 ವರ್ಷ ವಯಸ್ಸು. ಈ ವೇಳೆ ನಮ್ಮ ಮನೆಯಲ್ಲಿ ದೇವರ ಪೂಜೆ ನಡೆಯುತ್ತಿತ್ತು. ಆ ಪೂಜೆಯಲ್ಲಿ ನಾನು ಪಾಲ್ಗೊಂಡಿದ್ದೆ. ಆದರೆ ಆಗಲೇ ನನಗೆ ಪೀರಿಯಡ್ಸ್ ಆಯಿತು. ಆಗ ಅಮ್ಮ ನನ್ನ ಜೊತೆಯಲ್ಲಿ ಇರಲಿಲ್ಲ. ಆದ್ದರಿಂದ ನಾನು ನನ್ನ ಪಕ್ಕದಲ್ಲಿದ್ದ ಚಿಕ್ಕಮ್ಮನಿಗೆ ಈ ವಿಚಾರವನ್ನು ತಿಳಿಸಿದೆ. ನಾನು ಆ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ಕೂಡ ಧರಿಸಿರಲಿಲ್ಲ ಎಂದು ಅನೇಕ ವರ್ಷಗಳ ಹಿಂದೆ ನಡೆದಿದ್ದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.
ಈ ವೇಳೆ ಪಕ್ಕದಲ್ಲೇ ಇನ್ನೊಬ್ಬ ಒಳ್ಳೆಯ ಮಹಿಳೆ ಕುಳಿತಿದ್ದರು. ನಾನು ಚಿಂತೆಯಿಂದ ಚಿಕ್ಕಮ್ಮನಿಗೆ ಹೇಳಿದ ಮಾತನ್ನು ಅವರು ಕೇಳಿಸಿಕೊಂಡಿದ್ದರು. ಆಗ ಮಹಿಳೆ ನನ್ನ ಕಡೆ ನೋಡಿ ಧೈರ್ಯದಿಂದ ನಗುತ್ತ, ಪರವಾಗಿಲ್ಲ ಚಿನ್ನ, ದೇವರು ಕ್ಷಮಿಸುತ್ತಾರೆ. ಪೂಜೆ ಸಂದರ್ಭದಲ್ಲಿ ಋತುಚಕ್ರ ಆಗಿದ್ದಕ್ಕೆ ನೀನು ಚಿಂತಿಸಬೇಡ ಎಂದು ಹೇಳಿದ್ದರು. ಪೀರಿಯಡ್ಸ್ ಬಗ್ಗೆ ತಪ್ಪು ಕಲ್ಪನೆಗಳನ್ನು ಮನಸ್ಸಿನಿಂದ ತೆಗೆದು ಹಾಕಿದೆ. ಆಗ ನನಗೆ 14ರ ಪ್ರಾಯ ಆ ದಿನವೇ ನಾನು ಮಹಿಳಾವಾದಿ ಆದೆ ಎಂದು ನಟಿ ಶ್ರದ್ಧಾ ಶ್ರೀನಾಥ್ ಹೇಳಿಕೊಂಡಿದ್ದಾರೆ.
ಮಹಿಳೆಯರು ಋತುಚಕ್ರದ ಬಗ್ಗೆ ಮಾತನಾಡಲು ಹಿಂಜರಿಯುತ್ತಾರೆ. ಆದರೆ, ಸ್ಯಾಂಡಲ್ ವುಡ್ ನಟಿ ಶ್ರದ್ಧಾ ಶ್ರೀನಾಥ್ ಈ ಕುರಿತು ಬೋಲ್ಡ್ ಆಗಿ ಮಾತನಾಡಿದ್ದಾರೆ.

ಈ ಬೋಲ್ಡ್ ಹೇಳಿಕೆಯನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಶ್ರದ್ಧಾ 14ನೇ ವಯಸ್ಸಿನಲ್ಲಿಯೇ ಸ್ತ್ರೀವಾದಿಯಾದ ಬಗ್ಗೆ ಇನ್ಸ್ಟಾ ಗ್ರಾಂನಲ್ಲಿ ಬಹಿರಂಗವಾಗಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ನಗರಸಭೆ ಚುನಾವಣೆ :ವಾರ್ಡ ನಂ22ರ ಕಾಂಗ್ರೇಸ್ ಅಭ್ಯರ್ಥಿ ಪರ ಮಾಜಿ ಶಾಸಕ ಡಿ ಆರ್ ಪಾಟೀಲ ಗಂಗಿಮಡಿಯಲ್ಲಿ ಪ್ರಚಾರ

ಗದಗ:ನಗರಸಭೆ ಚುನಾವಣೆ ಡಿ. 20-12-2021 ರಂದು ವಾರ್ಡ್ ನಂ 22 ರ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ…

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾದಂತಾಗಿದೆ.