ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.
ಕೇಂದ್ರ ಸರ್ಕಾರ ಜೂನ್ 8ರಿಂದ ದೇವಸ್ಥಾನ ತೆರೆಯಲು ಸೂಚಿಸಿದೆ.
ಹೀಗಾಗಿ ನಾವು ಕೇಂದ್ರದ ಆದೇಶ ಪಾಲಿಸುತ್ತೇವೆ ಎಂದರು.
ರಾಜ್ಯದ ಎಲ್ಲಾ ದೇವಾಲಯಗಳು ಜೂ.8 ಕ್ಕೆ ತೆರೆಯಲಿವೆ. ಧಾರ್ಮಿಕ ದತ್ತಿ ಇಲಾಖೆ ಹೊರತಾದ ದೇವಸ್ಥಾನಗಳು ಜೂ.8 ರಿಂದ ಆರಂಭವಾಗಲಿವೆ.
ದೇವಸ್ಥಾನದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧ ರಿಸುವುದು, ಸ್ವಚ್ಛತೆಗೆ ಆದ್ಯತೆ ಕಡ್ಡಾಯವಾಗಿದೆ.
ಗರ್ಭಗುಡಿಯೊಳಗೆ ಅರ್ಚಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು.
ಗರ್ಭಗುಡಿಯ ಒಳಗೆ ಪ್ರವೇಶಿಸಿ ಮುಟ್ಟಿ ಪೂಜೆ ಮಾಡುವ ಅವಕಾಶ ಇಲ್ಲ ಎಂದರು.
ವಿಸ್ತೃತವಾದ ಮಾರ್ಗಸೂಚಿ ಶೀಘ್ರವೇ ಬಿಡುಗಡೆ ಮಾಡ್ತೇವೆ. ಖಾಸಗಿ ದೇವಾಲಯ, ಮಠ ತೆರೆಯುವುದು ಅವರ ವಿವೇಚನೆಗೆ ಬಿಟ್ಟ ವಿಚಾರ.
ದೇವಾಲಯಗಳಲ್ಲಿ ಗಂಧ, ಕುಂಕುಮ ನೀಡಲಾಗುವುದು. ತೀರ್ಥ ಪ್ರಸಾದ ನೀಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.
ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಧಾರ್ಮಿಕ ಸಮಾರಂಭ ಹಾಗೂ ಜಾತ್ರೆಗೆ ಅವಕಾಶ ಇಲ್ಲ. ಲಾಕ್ಡೌನ್ ನಿಂದ ಮುಜರಾಯಿ ದೇವಸ್ಥಾನಗಳಿಗೆ ನಷ್ಟವಾಗಿದೆ. ಶೇ.30 ಕ್ಕೂ ಅಧಿಕ ಆದಾಯಕ್ಕೆ ಕಡಿವಾಣ ಬಿದ್ದಿದೆ. ಏಪ್ರಿಲ್-ಮೇ ತಿಂಗಳ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಗದಗ : ಗ್ರಾಮೀಣಾಭಿವೃದ್ಧಿ ವಿವಿ ಪರೀಕ್ಷೆ ಮುಂದೂಡಿಕೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರೀಲ್ 19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಇನ್ಮೂಂದೆ ಆಯುಷ್ಮಾನ ಫಲಾನುಭವಿಗಳಿಗೆ ಅರ್ಹತಾ ಕಾರ್ಡ್ಉಚಿತ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಫಲಾನುಭವಿಗಳು ತಮ್ಮ ಅರ್ಹತಾ ಕಾರ್ಡ್ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ.

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಶಿರಹಟ್ಟಿ ಮಾಬುಸುಬಾನಿ ಉರುಸು ರದ್ದು

ಮಾಬುಸುಬಾನಿ ಉರುಸು ರದ್ದು ಪಟ್ಟಣದಲ್ಲಿ ಭಾವೈಕ್ಯತೆ ಸಂಕೇತವಾಗಿದ್ದ ಹಜರತ್ ಮೆಹಬೂಬ ಸುಬ್ಹಾನಿ(ರಹ) ದರ್ಗಾದ ಉರುಸು ಈ ಬಾರಿ ಕೊರೊನಾದಿಂದ ರದ್ದುಗೊಳಿಸಲಾಗಿದೆ. ಉರುಸು ನಿಮಿತ್ಯ ನವೆಂಬರ್ 25 ರಿಂದ 27ರವರೆಗೆ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮದಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಆದೇಶದ ಪ್ರಕಾರ ರದ್ದುಗೊಳಿಸಲಾಗಿದೆ.