ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ ಹೊರಡಿಸಿದೆ. ಈ ಮೂಲಕ ಈ ಸಮುದಾಯಗಳಿಗೆ ಸೇರಿದ ಜನರ ಬಹುದಿನಗಳ ಬೇಡಿಕೆಯೊಂದು ಈಡೇರಿದಂತಾಗಿದೆ. ಇನ್ನು ಮುಂದೆ ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಈ ಸಮುದಾಯದವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಅವಕಾಶಗಳು ವಿಸ್ತರಿಸಲಿವೆ.

ಕರ್ನಾಟಕ ಸರ್ಕಾರ ಹೊರಡಿಸಿದ ಗೆಜೆಟ್

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪರಿವಾರ, ತಳವಾರ, ಸಿದ್ದಿ ಸಮುದಾಯಗಳನ್ನು ವಿಳಂಬವಾಗಿಯಾದರೂ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಗೆಜೆಟ್ ಆದೇಶ ಹೊರಡಿಸಿರುವ @CMofKarnataka ಅವರಿಗೆ ಧನ್ಯವಾದಗಳು. ಹಿಂದೆ ನಮ್ಮ ಸರ್ಕಾರ ಈ ಬಗ್ಗೆ ಸಂಪುಟದಲ್ಲಿ ತೀರ್ಮಾನಿಸಿ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಟ್ಟಿತ್ತು. ಸಹಕರಿಸಿದ ಎಲ್ಲರಿಗೂ ವಂದನೆಗಳು! ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…

ಅಡಕೆ ನುಂಗಿದ ಮಗು ಉಸಿರುಗಟ್ಟಿ ಸಾವು

ತಾಲೂಕು ಹೆದ್ದೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. 1 ವರ್ಷ ಒಂದು ತಿಂಗಳ ಮಗು ನಿಶಾನ್ ಮೃತಪಟ್ಟಿದೆ. ಸಂದೇಶ ಮತ್ತು ಅರ್ಚನಾ ದಂಪತಿಗಳ ಮಗು ನಿಶಾನ್ ಆರೋಗ್ಯವಾಗಿತ್ತು. ಆಟವಾಡುವಾಗ ಅಡಕೆ ನುಂಗಿದ್ದರಿಂದ, ಉಸಿರುರಾಡಲು ಕಷ್ಟವಾಗಿದೆ. ತಕ್ಷಣವೇ ಮಗುವನ್ನು ಕಟ್ಟೆಹಕ್ಕಲುವಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಲ್ಲಿಂದ ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿದೆ. ಆದರೆ, ಉಸಿರಾಡಲು ಕಷ್ಟವಾಗಿ ಮಗು ಮೃತಪಟ್ಟಿದೆ.

ಕೊಪ್ಪಳ ಮೂಲದ ಮಸ್ಕಿ ಕೆನರಾ ಬ್ಯಾಂಕ್ ಉದ್ಯೋಗಿಗೂ ಕೊರೊನಾ..!

ಮಸ್ಕಿ: ಪಟ್ಟಣದ ಬ್ಯಾಂಕಿನ ಉದ್ಯೋಗಿಗೆ ಕೊರೊನಾ ಪಾಸಿಟಿವ್ ದೃಡ ಪಟ್ಟಿರುವ ಹಿನ್ನಲ್ಲೆಯಲ್ಲಿ ಬ್ಯಾಂಕ್ ವನ್ನು ಸಿಲ್…

ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.