ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ ಹೊರಡಿಸಿದೆ. ಈ ಮೂಲಕ ಈ ಸಮುದಾಯಗಳಿಗೆ ಸೇರಿದ ಜನರ ಬಹುದಿನಗಳ ಬೇಡಿಕೆಯೊಂದು ಈಡೇರಿದಂತಾಗಿದೆ. ಇನ್ನು ಮುಂದೆ ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಈ ಸಮುದಾಯದವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಅವಕಾಶಗಳು ವಿಸ್ತರಿಸಲಿವೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪರಿವಾರ, ತಳವಾರ, ಸಿದ್ದಿ ಸಮುದಾಯಗಳನ್ನು ವಿಳಂಬವಾಗಿಯಾದರೂ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಗೆಜೆಟ್ ಆದೇಶ ಹೊರಡಿಸಿರುವ @CMofKarnataka ಅವರಿಗೆ ಧನ್ಯವಾದಗಳು. ಹಿಂದೆ ನಮ್ಮ ಸರ್ಕಾರ ಈ ಬಗ್ಗೆ ಸಂಪುಟದಲ್ಲಿ ತೀರ್ಮಾನಿಸಿ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಟ್ಟಿತ್ತು. ಸಹಕರಿಸಿದ ಎಲ್ಲರಿಗೂ ವಂದನೆಗಳು! ಎಂದಿದ್ದಾರೆ.