ಹೈದರಾಬಾದ್: ಲಾಕ್‍ಡೌನ್ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಾಪಿ ತಂದೆಯೊಬ್ಬ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತೆ ಜಿಲ್ಲೆಯ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಾರ್ಚ್ ನಲ್ಲಿ ಶಾಲಾ, ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಮುಚ್ಚಿವೆ. ಹೀಗಾಗಿ ಸಂತ್ರಸ್ತೆ ತನ್ನ ಮನೆಗೆ ಮರಳಿದ್ದಳು.

35 ವರ್ಷದ ಆರೋಪಿ ತಂದೆ ದೈನಂದಿನ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆರೋಪಿ ಈಗಾಗಲೇ ನಾಲ್ಕು ಮದುವೆಯಾಗಿದ್ದಾನೆ. ಆತನ ಮೊದಲ ಮತ್ತು ಎರಡನೇ ಪತ್ನಿಗೆ ಡಿವೋರ್ಸ್ ನೀಡಿದ್ದ. ಮೂರನೇ ಪತ್ನಿ ಮೃತಪಟ್ಟಿದ್ದಳು. ಸಂತ್ರಸ್ತೆ ಮೂರನೇ ಹೆಂಡತಿಯ ಮಗಳಾಗಿದ್ದಾಳೆ. ಆರೋಪಿ ಪ್ರಸ್ತುತ ತನ್ನ ತಾಯಿ, ನಾಲ್ಕನೇ ಪತ್ನಿ ಮತ್ತು ಮಗನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಮನೆಗೆ ಹಿಂದಿರುಗಿದ ನಂತರ ಲಾಕ್‍ಡೌನ್ ಸಂದರ್ಭದಲ್ಲಿ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆರೋಪಿಯ ಈ ಕೃತ್ಯದ ಬಗ್ಗೆ ಕುಟುಂಬದವರಿಗೆ ಗೊತ್ತಿರಲಿಲ್ಲ. ಆರೋಪಿ ತಂದೆ ಮನೆಯಲ್ಲಿ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಹೀಗಾಗಿ ಸಂತ್ರಸ್ತೆ ಈ ವಿಚಾರವನ್ನು ಯಾರಿಗೂ ಹೇಳಿಲ್ಲ. ಆದರೆ ಇತ್ತೀಚೆಗೆ ಮತ್ತೆ ಆರೋಪಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊನೆಗೆ ಸಂತ್ರಸ್ತೆ ತನ್ನ ಚಿಕ್ಕಮ್ಮನಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಆಗ ಮಲತಾಯಿ ಪೊಲೀಸ್ ಠಾಣೆಗೆ ಹೋಗಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು

ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.

ದೀಪಾವಳಿಗೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ಬಸ್!

ಬೆಂಗಳೂರ : ದೀಪಾವಳಿಯ ಅಂಗವಾಗಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ 1 ಸಾವಿರ ಹೆಚ್ಚುವರಿ ಬಸ್ ಗಳನ್ನು ಓಡಿಸಲು ಮುಂದಾಗಿದೆ.

ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಳ್ಳದಿದ್ರೆ ಜನ ಆಸ್ಪತ್ರೆಗಳಲ್ಲಿ ಸಾವೀಗೀಡಾಗಬೇಕಾದೀತು : ಶಾಸಕ ಎಚ್.ಕೆ.ಪಾಟೀಲ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ನ ಅಭಾವಿದೆ. ಆಕ್ಸಿಜನ್ ಕುರಿತಂತೆ ಗಂಭೀರವಾದ, ದೃಢವಾದ ತಕ್ಷಣದ ಹೆಜ್ಜೆಗಳನ್ನಿಡದೇ ಹೋದರೆ ಜನ ಆಸ್ಪತ್ರೆಗಳಲ್ಲಿ ಬಾರೀ ಸಂಖ್ಯೆಯಲ್ಲಿ ಸಾವೀಗೀಡಾಗಬೇಕಾದ ಪ್ರಸಂಗ ಬಂದೀತು ಎಂದು ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…