ಹೈದರಾಬಾದ್: ಲಾಕ್‍ಡೌನ್ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಾಪಿ ತಂದೆಯೊಬ್ಬ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತೆ ಜಿಲ್ಲೆಯ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಾರ್ಚ್ ನಲ್ಲಿ ಶಾಲಾ, ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಮುಚ್ಚಿವೆ. ಹೀಗಾಗಿ ಸಂತ್ರಸ್ತೆ ತನ್ನ ಮನೆಗೆ ಮರಳಿದ್ದಳು.

35 ವರ್ಷದ ಆರೋಪಿ ತಂದೆ ದೈನಂದಿನ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆರೋಪಿ ಈಗಾಗಲೇ ನಾಲ್ಕು ಮದುವೆಯಾಗಿದ್ದಾನೆ. ಆತನ ಮೊದಲ ಮತ್ತು ಎರಡನೇ ಪತ್ನಿಗೆ ಡಿವೋರ್ಸ್ ನೀಡಿದ್ದ. ಮೂರನೇ ಪತ್ನಿ ಮೃತಪಟ್ಟಿದ್ದಳು. ಸಂತ್ರಸ್ತೆ ಮೂರನೇ ಹೆಂಡತಿಯ ಮಗಳಾಗಿದ್ದಾಳೆ. ಆರೋಪಿ ಪ್ರಸ್ತುತ ತನ್ನ ತಾಯಿ, ನಾಲ್ಕನೇ ಪತ್ನಿ ಮತ್ತು ಮಗನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಮನೆಗೆ ಹಿಂದಿರುಗಿದ ನಂತರ ಲಾಕ್‍ಡೌನ್ ಸಂದರ್ಭದಲ್ಲಿ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆರೋಪಿಯ ಈ ಕೃತ್ಯದ ಬಗ್ಗೆ ಕುಟುಂಬದವರಿಗೆ ಗೊತ್ತಿರಲಿಲ್ಲ. ಆರೋಪಿ ತಂದೆ ಮನೆಯಲ್ಲಿ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಹೀಗಾಗಿ ಸಂತ್ರಸ್ತೆ ಈ ವಿಚಾರವನ್ನು ಯಾರಿಗೂ ಹೇಳಿಲ್ಲ. ಆದರೆ ಇತ್ತೀಚೆಗೆ ಮತ್ತೆ ಆರೋಪಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊನೆಗೆ ಸಂತ್ರಸ್ತೆ ತನ್ನ ಚಿಕ್ಕಮ್ಮನಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಆಗ ಮಲತಾಯಿ ಪೊಲೀಸ್ ಠಾಣೆಗೆ ಹೋಗಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ

ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.

ನೀಟ್ (NEET) ಪರೀಕ್ಷೆಯ ದಿನಾಂಕ ಘೋಷಣೆ!

ಈ ಪರೀಕ್ಷೆಯು ದೇಶದಾದ್ಯಂತ ನಡೆಯಲಿದ್ದು ಕೋವಿಡ್ ಸೋಂಕು ಹರಡುತ್ತಿರುವುದರಿಂದ ಪರೀಕ್ಷೆಯ ಕೇಂದ್ರಗಳನ್ನು ಹೆಚ್ಚಿಸಲಾಗುವುದು ಹಾಗೂ ಈ ಮುಂಚೆ 155 ನಗರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈಗ 198 ನಗರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಹಾಗೂ 3862 ಕೇಂದ್ರಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ನದಿ ಹಿನ್ನಿರಿನಿಂದ ನುಸುಳುತ್ತಿದ್ದಾರೆ ಜನ

ಗಡಿಯಿಂದ ರಾಜ್ಯಕ್ಕೆ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆ ಕಬಿನಿ ಹಿನ್ನೀರಿನ ಮೂಲಕ ಕೇರಳದಿಂದ ಜನರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಕೇರಳಾಗೆ ಕೂಲಿಗಾಗಿ ತೆರಳಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿ ಕೇರಳದಿಂದ ಕರ್ನಾಟಕ ಬರುತ್ತಿದ್ದಾರೆ.