ಗದಗ: ನಾಳೆ ಗದಗ ನಗರಕ್ಕೆ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲು ಆಗಮಿಸಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಹೇಳಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದ ಜನ ಮುಂಬೈನಲ್ಲಿ ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಮುಂಬೈ ಕನ್ನಡಿಗರನ್ನು ಅನಿವಾರ್ಯವಾಗಿ ಕರೆಸಿಕೊಳ್ಳಬೇಕಿದೆ ಎಂದರು.
ಎಷ್ಟು ಜನ ಮುಂಬೈನಿಂದ ಬರ್ತಾರೆ ಎಂಬ ಸ್ಪಷ್ಟ ಮಾಹಿತಿ ಬಂದಿಲ್ಲ. ನಾಳೆ ಬೆಳಿಗ್ಗೆ 11 ಗಂಟೆ ನಂತರ ಗದಗ ನಿಲ್ದಾಣಕ್ಕೆ ಮುಂಬೈ ರೈಲು ಬರಲಿದೆ. ಬಂದವರನ್ನು ಗದಗ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ ಮಾಡಿ ಮುಂಬೈ ಕನ್ನಡಿಗರನ್ನು 7 ದಿನ ಕ್ವಾರಂಟೈನ್ ಮಾಡಲಾಗುತ್ತದೆ.
ಮುಂಬೈ ನಿಂದ ಗದಗ ಜಿಲ್ಲೆಗೆ ನಿರೀಕ್ಷೆ ಮೀರಿ‌ ಜನ ಬಂದರೂ ಕ್ವಾರಂಟೈನ್ ಮಾಡುತ್ತೇವೆ. ಪ್ರಯಾಣಿಕರಿಗೆ ಯಾವುದೇ ಅನಾನುಕೂಲ ಆಗದಂತೆ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ. ಜಿಲ್ಲಾ ಕೇಂದ್ರದಲ್ಲಿ‌ ಕ್ವಾರಂಟೈನ್ ಕೇಂದ್ರಗಳು ಸಾಕಾಗದಿದ್ದರೆ ತಾಲೂಕ ಕೇಂದ್ರಗಳಿಗೂ ಕಳುಹಿಸಿ ಕೊಡಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,014ರಷ್ಟು ದಾಖಲಾಗಿದೆ.

ನಿವೃತ್ತ ಕರಣಿಕ ಶಾಂತೂ ತಡಸಿಗೆ ಹೃದಯಸ್ಪರ್ಶಿ ಸನ್ಮಾನ ಗುರುಗಳೇ ದೇವರು ಶಿಷ್ಯರೇ ಭಕ್ತರು-ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ

ಉತ್ತರಪ್ರಭ ಸುದ್ದಿಆಲಮಟ್ಟಿ: ಮಕ್ಕಳನ್ನು ಪರಿಪೂರ್ಣ ಶಿಲೆಗಳನ್ನಾಗಿ ರೂಪಿಸುವಲ್ಲಿ ಗುರುಗಳ ಹಾಗು ಗುರುಮಾತೆಯರ ಪಾತ್ರ ಬಹುಮುಖ್ಯ ಎಂದು…

ಗದಗ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ ಕ್ವಾರಂಟೈನ್ ಕೇಂದ್ರ..!

ನಿನ್ನೆಯಷ್ಟೆ ರಾಜ್ಯದ ಉಡುಪಿ ಜಿಲ್ಲೆಯ ಕೊರೋನಾ ಸೋಂಕು ವ್ಯಾಪಕವಾಗುವುದರಲ್ಲಿ ಕ್ವಾರಂಟೈನ್ ಕೇಂದ್ರಗಳ ಪಾತ್ರ ಹಾಗೂ ಅವ್ಯವಸ್ಥೆ ಕುರಿತು ಉತ್ತರಪ್ರಭ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೆ ಇದೀಗ ಗದಗ ಜಿಲ್ಲೆಯಲ್ಲಿನ ನಿನ್ನೆಯ ಪ್ರಕರಣದ ಟ್ರಾವೆಲ್ ಹಿಸ್ಟರಿ ಬೆನ್ನತ್ತಿದಾಗ ತಾಲೂಕು ಆಡಳಿತದ ನಿರ್ಲಕ್ಷ್ಯ ಎದ್ದು ತೋರುತ್ತಿದೆ.