ಗದಗ: ನಾಳೆ ಗದಗ ನಗರಕ್ಕೆ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲು ಆಗಮಿಸಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಹೇಳಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದ ಜನ ಮುಂಬೈನಲ್ಲಿ ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಮುಂಬೈ ಕನ್ನಡಿಗರನ್ನು ಅನಿವಾರ್ಯವಾಗಿ ಕರೆಸಿಕೊಳ್ಳಬೇಕಿದೆ ಎಂದರು.
ಎಷ್ಟು ಜನ ಮುಂಬೈನಿಂದ ಬರ್ತಾರೆ ಎಂಬ ಸ್ಪಷ್ಟ ಮಾಹಿತಿ ಬಂದಿಲ್ಲ. ನಾಳೆ ಬೆಳಿಗ್ಗೆ 11 ಗಂಟೆ ನಂತರ ಗದಗ ನಿಲ್ದಾಣಕ್ಕೆ ಮುಂಬೈ ರೈಲು ಬರಲಿದೆ. ಬಂದವರನ್ನು ಗದಗ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ ಮಾಡಿ ಮುಂಬೈ ಕನ್ನಡಿಗರನ್ನು 7 ದಿನ ಕ್ವಾರಂಟೈನ್ ಮಾಡಲಾಗುತ್ತದೆ.
ಮುಂಬೈ ನಿಂದ ಗದಗ ಜಿಲ್ಲೆಗೆ ನಿರೀಕ್ಷೆ ಮೀರಿ‌ ಜನ ಬಂದರೂ ಕ್ವಾರಂಟೈನ್ ಮಾಡುತ್ತೇವೆ. ಪ್ರಯಾಣಿಕರಿಗೆ ಯಾವುದೇ ಅನಾನುಕೂಲ ಆಗದಂತೆ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ. ಜಿಲ್ಲಾ ಕೇಂದ್ರದಲ್ಲಿ‌ ಕ್ವಾರಂಟೈನ್ ಕೇಂದ್ರಗಳು ಸಾಕಾಗದಿದ್ದರೆ ತಾಲೂಕ ಕೇಂದ್ರಗಳಿಗೂ ಕಳುಹಿಸಿ ಕೊಡಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ಎಸ್ಸೆಸ್ಸೆಲ್ಸಿ ಪರೀಕ್ಷೆ ಅವಕಾಶ, ಆರ್‌ಟಿಇ ಶುಲ್ಕ ಮರುಪಾವತಿ ನಿಯಮಗಳ ಸಡಿಲಿಕೆ

ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್ ಟಿ ಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಗದಗ ಜಿಲ್ಲೆಯಲ್ಲಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಿದರೆ ಪರವಾನಿಗೆ ರದ್ದಾಗುತ್ತಂತೆ!

ರಸಗೊಬ್ಬರ ದಾಸ್ತಾನನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರಸಗೊಬ್ಬರ ಪರವಾನಿಗೆಯನ್ನು ರದ್ದುಗೊಳಿಸಿ, ಕಾನೂನು ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಮಾರಾಟಗಾರರು ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರೈತ ಬಾಂಧವರು ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಈ ಕೆಳಗಿನ ದೂರವಾಣಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ತಿಳಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯೊಂದಿಗೆ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಿದೆ.

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ