ಗದಗ: ನಾಳೆ ಗದಗ ನಗರಕ್ಕೆ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲು ಆಗಮಿಸಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಹೇಳಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದ ಜನ ಮುಂಬೈನಲ್ಲಿ ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಮುಂಬೈ ಕನ್ನಡಿಗರನ್ನು ಅನಿವಾರ್ಯವಾಗಿ ಕರೆಸಿಕೊಳ್ಳಬೇಕಿದೆ ಎಂದರು.
ಎಷ್ಟು ಜನ ಮುಂಬೈನಿಂದ ಬರ್ತಾರೆ ಎಂಬ ಸ್ಪಷ್ಟ ಮಾಹಿತಿ ಬಂದಿಲ್ಲ. ನಾಳೆ ಬೆಳಿಗ್ಗೆ 11 ಗಂಟೆ ನಂತರ ಗದಗ ನಿಲ್ದಾಣಕ್ಕೆ ಮುಂಬೈ ರೈಲು ಬರಲಿದೆ. ಬಂದವರನ್ನು ಗದಗ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ ಮಾಡಿ ಮುಂಬೈ ಕನ್ನಡಿಗರನ್ನು 7 ದಿನ ಕ್ವಾರಂಟೈನ್ ಮಾಡಲಾಗುತ್ತದೆ.
ಮುಂಬೈ ನಿಂದ ಗದಗ ಜಿಲ್ಲೆಗೆ ನಿರೀಕ್ಷೆ ಮೀರಿ‌ ಜನ ಬಂದರೂ ಕ್ವಾರಂಟೈನ್ ಮಾಡುತ್ತೇವೆ. ಪ್ರಯಾಣಿಕರಿಗೆ ಯಾವುದೇ ಅನಾನುಕೂಲ ಆಗದಂತೆ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ. ಜಿಲ್ಲಾ ಕೇಂದ್ರದಲ್ಲಿ‌ ಕ್ವಾರಂಟೈನ್ ಕೇಂದ್ರಗಳು ಸಾಕಾಗದಿದ್ದರೆ ತಾಲೂಕ ಕೇಂದ್ರಗಳಿಗೂ ಕಳುಹಿಸಿ ಕೊಡಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ನಿಮ್ಮೊಡನಿದ್ದೂ ನಿಮ್ಮಂತಾಗದೆ

ಪ್ರಸ್ತುತ ಸಂದರ್ಭದಲ್ಲಿ ನಿಸಾರ್ ಅಹ್ಮದ್ ಅವರು ರಚಿಸಿದ ನಿಮ್ಮೊಡನಿದ್ದೂ ನಿಮ್ಮಂತಾಗದೆ ಎನ್ನುವ ಕವನ ಇಂದಿನ ದಿನಮಾನಗಳಲ್ಲಿ ವಾಸ್ತವಕ್ಕೆ ಹತ್ತಿರವಾಗಿದ್ದು, ನಮ್ಮನ್ನಗಲಿದ ಸಾಹಿತಿ ಕೆ.ಎಸ್.ನಿಸಾರ್ ಅಹ್ಮದ್ ಅವರಿಗೆ ‘ಉತ್ತರ ಪ್ರಭ’ದ ನುಡಿ ನಮನ…

ಪಾದಯಾತ್ರೆ ಕೈಗೊಂಡ ಅಪ್ಪು ಅಭಿಮಾನಿಗೆ ಸನ್ಮಾನ

ವರದಿ : ವಿಠಲ‌ ಕೆಳೂತ್ ಮಸ್ಕಿ: ಬೆಂಗಳೂರುನಲ್ಲಿನ ಪುನೀತ ರಾಜಕುಮಾರ ಸಮಾಧಿವರೆಗೆ ಪಾದಯಾತ್ರೆ ನಡೆಸಿರುವ ಅಪ್ಪು…

ಒಮಿಕ್ರಾನ ಭಿತಿ ಇಂದಲ್ಲಾ ನಾಳೆಯಿಂದ ಶುರು..!

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುಣಾವಣೆಗೆ ಮತದಾನ ನಡೆಯುತ್ತಿದ್ದು, ನಗರದ 35 ವಾರ್ಡಗಳಲ್ಲಿ ನಡಿಯುತ್ತಿರುವ…

ಕೊರೊನಾ ಜನರಲ್ಲಿ ಆತಂಕ ಬೇಡ: ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾದಿಂದಾಗಿ ಪರಿಸ್ಥಿತಿ ಹದಗೆಟ್ಟಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಬೆಂಗಳೂರು ತೊರೆಯಬೇಡಿ…