ಗದಗ: ನಾಳೆ ಗದಗ ನಗರಕ್ಕೆ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲು ಆಗಮಿಸಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಹೇಳಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದ ಜನ ಮುಂಬೈನಲ್ಲಿ ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಮುಂಬೈ ಕನ್ನಡಿಗರನ್ನು ಅನಿವಾರ್ಯವಾಗಿ ಕರೆಸಿಕೊಳ್ಳಬೇಕಿದೆ ಎಂದರು.
ಎಷ್ಟು ಜನ ಮುಂಬೈನಿಂದ ಬರ್ತಾರೆ ಎಂಬ ಸ್ಪಷ್ಟ ಮಾಹಿತಿ ಬಂದಿಲ್ಲ. ನಾಳೆ ಬೆಳಿಗ್ಗೆ 11 ಗಂಟೆ ನಂತರ ಗದಗ ನಿಲ್ದಾಣಕ್ಕೆ ಮುಂಬೈ ರೈಲು ಬರಲಿದೆ. ಬಂದವರನ್ನು ಗದಗ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ ಮಾಡಿ ಮುಂಬೈ ಕನ್ನಡಿಗರನ್ನು 7 ದಿನ ಕ್ವಾರಂಟೈನ್ ಮಾಡಲಾಗುತ್ತದೆ.
ಮುಂಬೈ ನಿಂದ ಗದಗ ಜಿಲ್ಲೆಗೆ ನಿರೀಕ್ಷೆ ಮೀರಿ‌ ಜನ ಬಂದರೂ ಕ್ವಾರಂಟೈನ್ ಮಾಡುತ್ತೇವೆ. ಪ್ರಯಾಣಿಕರಿಗೆ ಯಾವುದೇ ಅನಾನುಕೂಲ ಆಗದಂತೆ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ. ಜಿಲ್ಲಾ ಕೇಂದ್ರದಲ್ಲಿ‌ ಕ್ವಾರಂಟೈನ್ ಕೇಂದ್ರಗಳು ಸಾಕಾಗದಿದ್ದರೆ ತಾಲೂಕ ಕೇಂದ್ರಗಳಿಗೂ ಕಳುಹಿಸಿ ಕೊಡಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆಗೆ ಯತ್ನ ಚಿಕಿತ್ಸೆ ಫಲಿಸದೆ ಸಾವು

ಗದಗ:ಸಾಲಕ್ಕೆ ಹೆದರಿ ಗದಗ ತಾಲೂಕಿನ ಬೆಳದಡಿ ತಾಂಡಾದ ರೈತ ವೆಂಕಟೇಶ ಶಿವಪ್ಪ ಚವ್ಹಾಣ ವಯಸ್ಸು:32 ಆತ್ಮಹತ್ಯೆಗೆ…

ಗೊಜನೂರು ಎರೆಬೂದಿಹಾಳ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಎರೆ ಬೂದಿಹಾಳ ರಸ್ತೆ ಕಾಮಗಾರಿಗೆ ರವಿವಾರ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಮೃತ ಎಂದು ಶವಾಗಾರಕ್ಕೆ ಹೋಗಿ ಬದುಕಿ ಬಂದಿದ್ದ ಬಾಗಲಕೋಟೆ ಯುವಕ ಸಾವು

ಕೆಲ ದಿನಗಳ ಹಿಂದೆ ಜೀವ ಇರುವಾಗಲೇ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದ ಮಹಾ ಎಡವಟ್ಟೊಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ನಡೆದಿತ್ತು.

ಅಕ್ಕಿ ಕೊಡಿ ಎಂದಿದ್ದಕ್ಕೆ ಸತ್ತು ಹೋಗು ಎಂದ ಅಹಾರ ಸಚಿವ

ಪಡಿತರದಲ್ಲಿನ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಸತ್ತು ಹೋಗು ಎಂದು ಹೇಳಿ ಉಡಾಫೆತನ ವರ್ತಿಸಿದ್ದಾರೆ.