ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ, ಸೆಲ್ಯುಲಾರ್ ಜೈಲುವಾಸದ ಬಗ್ಗೆ ಕಾಂಗ್ರೆಸ್ ನವರು ತಿಳಿಯಲಿ ಎಂದು ಗದಗನಲ್ಲಿ ಗಣಿ‌ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ವೀರ ಸಾವರ್ಕರದ ಬಗ್ಗೆ ಮಾತಾಡುವ ಯೋಗ್ಯತೆ ಒಬ್ಬ ಕಾಂಗ್ರೆಸ್ಸಿಗರಿಗೂ ಇಲ್ಲ
ಕಾಂಗ್ರೆಸ್ ನವರಿಗೆ ನೆಹರೂ ಸಂಸ್ಕ್ರತಿಯ ಮಾತ್ರ ಗೊತ್ತಿದೆ. ತ್ಯಾಗ ಬಲಿದಾನ ಮಾಡಿದ ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್, ಸರ್ದಾರ್ ವಲ್ಲಭಬಾಯಿ ಪಟೇಲ್, ಲೋಜಮಾನ್ಯ ತಿಲಕ ಇವರು ಯಾರೂ ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲ.
ಸಾವರ್ಕರ್ ಬಿಜೆಪಿಯವರಾ? ಅಥವಾ ಆ ಸಂದರ್ಭದಲ್ಲಿ ಬಿಜೆಪಿ ಇತ್ತಾ? ರಾಜೀವ್ ಗಾಂಧಿ ಮೆಡಿಕಲ್ ಕಾಲೇಜ್ ರಾಜೀವ್ ಗಾಂಧಿ ರೋಡ್ ಅಂತೆಲ್ಲಾ ಇದೆ. ಎಲ್ಲಾದ್ರೂ ನರೇಂದ್ರ ಮೋದಿ ರೋಡ್, ಯಡಿಯೂರಪ್ಪ ರೋಡ್ ಅಂತ ಇದೆಯಾ? ದೇಶವನ್ನು ಕಾಂಗ್ರೆಸ್ ನವರೇವ ಕಟ್ಟಿ ಬೆಳೆಸಿ ಉತ್ತುಂಗಕ್ಕೆ ತಂದ್ರಾ.? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನವರು ಹೇಳೋದು ಆಚಾರ ತಿನ್ನೋದು ಮಾತ್ರ ಬದನೆಕಾಯಿ ಎಂದು ಕುಟುಕಿದರು.

3 comments
  1. ಅಯ್ಯೊ ಸಿ ಸಿ ಪಾಟಿಲ್ರ ಮೊದಲು ಗದಗ ಮುಂಡರಗಿ ತುಂಗಭದ್ರಾ ನದಿಯಲ್ಲಿ ನಡೆಯುವ ಅಕ್ರಮ ಮರಳು ದಂದೆಗೆ ನಿಮ್ಮ ಹೆಸರು ಬರುತ್ತಿದೆ ಅದನ್ನ ಕ್ಲಿಯರ್ ಮಾಡಿ ಆ ಮೆಲೆ ಕಾಂಗ್ರೇಸ್ ಬಗ್ಗೆ ಮಾತಾಡುವಂತೆ

  2. ನಿಮ್ಮ ಕಣ್ಣಿ ಗೆ ಕರ್ನಾಟಕದವರು ಯಾರು ಕಾಣಲ್ಲವೇ. ಉತ್ತರ ಭಾರತದ ಕೋತಿಗಳೇ ಬೇಕೇ ನಿಮಗೆ. ಸಾವರ್ಕರ್
    ಏನು ಮಾಡಿದನೇ, ಇಲ್ಲ ಸೋನಿಯಾ ಅಥವಾ ರಾಹುಲ್ ಏನು ಮಾಡಿದ್ದಾರೆ

Leave a Reply

Your email address will not be published. Required fields are marked *

You May Also Like

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯ ಶಾಲಾ ಹಾಗೂ ಕಾಲೇಜಿನಲ್ಲಿ ನಾನಾ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರ‍್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಆನ್ ಲೈನ್ ವಂಚನೆ – ಶಿಕ್ಷಕರೇ ಇವರ ಟಾರ್ಗೆಟ್!

ಕೊಪ್ಪಳ : ಆನ್ ಲೈನ್ ವಂಚಕರು ಇಲ್ಲಿ ಶಿಕ್ಷಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಶಿಕ್ಷಕರ ಖಾತೆಗೆ ಕನ್ನ ಹಾಕಿ, ವಂಚಿಸುತ್ತಿರುವ ನೂರಾರು ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬರುತ್ತಿವೆ.

ಮದ್ಯದ ಅಮಲಿನಲ್ಲಿ ಮಡದಿಯ ಕೊಲೆ!

ಮದ್ಯದ ಮತ್ತಿನಲ್ಲಿ ಪತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.