ನವದೆಹಲಿ: ಎನ್ ಡಿಎ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದ ನಂತರ ಮೊದಲ ಸಂಪುಟ ಸಭೆ ನಡೆದಿದೆ. ಸಂಪುಟ ಸಭೆಯ ಬಳಿಕ ಕೈಗೊಳ್ಳಲಾದ ನಿರ್ಣಯಗಳ ಕುರಿತು ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಹಾಗೂ ನಿತಿನ್ ಗಡ್ಕರಿ ವಿಸ್ತೃತ ಮಾಹಿತಿ ನೀಡಿದರು.

ಎಂಎಸ್‌ಎಂಇಗಳಿಗೆ ಎರಡು ಪ್ಯಾಕೇಜ್‌ಗಳ ಜಾರಿಗಾಗಿ ಕಾರ್ಯವಿಧಾನಗಳು ಮತ್ತು ಮಾರ್ಗನಕ್ಷೆಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಎಂಎಸ್ ಎಂಇಗಳಿಗೆ  20 ಸಾವಿರ ಕೋಟಿ ರೂ.ಗಳ ಅಧೀನ ಸಾಲಕ್ಕೆ ಅನುಮೋದನೆ ನೀಡಲಾಗಿದೆ.ಇದರಿಂದ 2 ಲಕ್ಷ ಸಂಕಷ್ಟಕ್ಕೊಳಗಾಗಿರುವ ಸಣ್ಣ ಉದ್ಯಮಿಗಳಿಗೆ ನೆರವಾಗಲಿದೆ ಎಂದರು. ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಮೂಲಕ ಎಂಎಸ್‌ಎಂಇ ವಲಯಕ್ಕೆ ಶಕ್ತಿ ತುಂಬಲು ಈ ಕ್ರಮ ಹಾದಿ ಮಾಡಿಕೊಡಲಿದೆ ಎಂದು ಗಡ್ಕರಿ ಹೇಳಿದರು.

ಮಧ್ಯಮ ಉದ್ಯಮಗಳ ವಹಿವಾಟು ಮಿತಿಯನ್ನು 250 ಕೋಟಿ ರೂ.ಗೆ ತಿದ್ದುಪಡಿ ಮಾಡಲಾಗಿದ್ದು, ಹೂಡಿಕೆ ಮಿತಿಯನ್ನು 50 ಕೋಟಿ ರೂ.ಗೆ ಏರಿಸಲಾಗಿದೆ ಎಂದು ಜಾವಡೇಕರ್ ಹೇಳಿದ್ದಾರೆ.

ಕೃಷಿಕ ಸಮುದಾಯದ ಕಲ್ಯಾಣಕ್ಕಾಗಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರೈತರಿಗೆ ಪರಿಹಾರ ಒದಗಿಸಲು 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳು (ಎಂಎಸ್‌ಪಿ) ಶೇ. 50 ರಿಂದ ಶೇ.83ರಷ್ಟು ಹೆಚ್ಚಳ ಮಾಡಲಾಗಿದೆ. ರೈತರು ತಾವು ತೆಗೆದುಕೊಂಡಿರುವ ಸಾಲ ಮರುಪಾವತಿಸಲು ಆಗಸ್ಟ್ ವರೆಗೂ ಗಡುವು ನೀಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

150ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ನೆರವು ನೀಡಿದ್ದೇವೆ: ಪ್ರಧಾನಿ ಮೋದಿ

ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ…

ವೃದ್ಧರಿಗೆ ಬಿಸಿಯೂಟ ನೀಡಲು ಮುಂದಾದ ಕೇಂದ್ರ ಸರ್ಕಾರ

ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.