ನವದೆಹಲಿ: ಎನ್ ಡಿಎ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದ ನಂತರ ಮೊದಲ ಸಂಪುಟ ಸಭೆ ನಡೆದಿದೆ. ಸಂಪುಟ ಸಭೆಯ ಬಳಿಕ ಕೈಗೊಳ್ಳಲಾದ ನಿರ್ಣಯಗಳ ಕುರಿತು ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಹಾಗೂ ನಿತಿನ್ ಗಡ್ಕರಿ ವಿಸ್ತೃತ ಮಾಹಿತಿ ನೀಡಿದರು.

ಎಂಎಸ್‌ಎಂಇಗಳಿಗೆ ಎರಡು ಪ್ಯಾಕೇಜ್‌ಗಳ ಜಾರಿಗಾಗಿ ಕಾರ್ಯವಿಧಾನಗಳು ಮತ್ತು ಮಾರ್ಗನಕ್ಷೆಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಎಂಎಸ್ ಎಂಇಗಳಿಗೆ  20 ಸಾವಿರ ಕೋಟಿ ರೂ.ಗಳ ಅಧೀನ ಸಾಲಕ್ಕೆ ಅನುಮೋದನೆ ನೀಡಲಾಗಿದೆ.ಇದರಿಂದ 2 ಲಕ್ಷ ಸಂಕಷ್ಟಕ್ಕೊಳಗಾಗಿರುವ ಸಣ್ಣ ಉದ್ಯಮಿಗಳಿಗೆ ನೆರವಾಗಲಿದೆ ಎಂದರು. ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಮೂಲಕ ಎಂಎಸ್‌ಎಂಇ ವಲಯಕ್ಕೆ ಶಕ್ತಿ ತುಂಬಲು ಈ ಕ್ರಮ ಹಾದಿ ಮಾಡಿಕೊಡಲಿದೆ ಎಂದು ಗಡ್ಕರಿ ಹೇಳಿದರು.

ಮಧ್ಯಮ ಉದ್ಯಮಗಳ ವಹಿವಾಟು ಮಿತಿಯನ್ನು 250 ಕೋಟಿ ರೂ.ಗೆ ತಿದ್ದುಪಡಿ ಮಾಡಲಾಗಿದ್ದು, ಹೂಡಿಕೆ ಮಿತಿಯನ್ನು 50 ಕೋಟಿ ರೂ.ಗೆ ಏರಿಸಲಾಗಿದೆ ಎಂದು ಜಾವಡೇಕರ್ ಹೇಳಿದ್ದಾರೆ.

ಕೃಷಿಕ ಸಮುದಾಯದ ಕಲ್ಯಾಣಕ್ಕಾಗಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರೈತರಿಗೆ ಪರಿಹಾರ ಒದಗಿಸಲು 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳು (ಎಂಎಸ್‌ಪಿ) ಶೇ. 50 ರಿಂದ ಶೇ.83ರಷ್ಟು ಹೆಚ್ಚಳ ಮಾಡಲಾಗಿದೆ. ರೈತರು ತಾವು ತೆಗೆದುಕೊಂಡಿರುವ ಸಾಲ ಮರುಪಾವತಿಸಲು ಆಗಸ್ಟ್ ವರೆಗೂ ಗಡುವು ನೀಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.

ನಾಳೆಯಿಂದ ರೈಲು ಸಂಚಾರ ಆರಂಭ

ಲಾಕ್ ಡೌನ್ ಹಿನ್ನೆಲೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಇದೀಗ ನಾಳೆಯಿಂದ ರೈಲು ಸಂಚಾರ ಆರಂಭವಾಗಲಿದ್ದು, ರೈಲು ಸಂಚಾರಕ್ಕೆ ರೈಲ್ವೇ ಇಲಾಖೆ ಕೆಲವು ಷರತ್ತುಗಳನ್ನು ವಿಧಿಸಿde.

ಅಂತರ್ ಜಿಲ್ಲಾ ಪ್ರವಾಸಕ್ಕಾಗಿ ನೀವು ಏನು ಮಾಡಬೇಕು ಗೊತ್ತಾ?

ಲಾಕ್ ಡೌನ್ ಹಿನ್ನೆಲೆ ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವವರಿಗಾಗಿ ಅಂತರ್ ಜಿಲ್ಲಾ ಪ್ರವಾಸ ಕೈಗೊಳ್ಳಲು ಸರ್ಕಾರ ಪಾಸ್ ವ್ಯವಸ್ಥೆ ಮಾಡಿದೆ.