ನವದೆಹಲಿ: ಎನ್ ಡಿಎ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದ ನಂತರ ಮೊದಲ ಸಂಪುಟ ಸಭೆ ನಡೆದಿದೆ. ಸಂಪುಟ ಸಭೆಯ ಬಳಿಕ ಕೈಗೊಳ್ಳಲಾದ ನಿರ್ಣಯಗಳ ಕುರಿತು ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಹಾಗೂ ನಿತಿನ್ ಗಡ್ಕರಿ ವಿಸ್ತೃತ ಮಾಹಿತಿ ನೀಡಿದರು.

ಎಂಎಸ್‌ಎಂಇಗಳಿಗೆ ಎರಡು ಪ್ಯಾಕೇಜ್‌ಗಳ ಜಾರಿಗಾಗಿ ಕಾರ್ಯವಿಧಾನಗಳು ಮತ್ತು ಮಾರ್ಗನಕ್ಷೆಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಎಂಎಸ್ ಎಂಇಗಳಿಗೆ  20 ಸಾವಿರ ಕೋಟಿ ರೂ.ಗಳ ಅಧೀನ ಸಾಲಕ್ಕೆ ಅನುಮೋದನೆ ನೀಡಲಾಗಿದೆ.ಇದರಿಂದ 2 ಲಕ್ಷ ಸಂಕಷ್ಟಕ್ಕೊಳಗಾಗಿರುವ ಸಣ್ಣ ಉದ್ಯಮಿಗಳಿಗೆ ನೆರವಾಗಲಿದೆ ಎಂದರು. ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಮೂಲಕ ಎಂಎಸ್‌ಎಂಇ ವಲಯಕ್ಕೆ ಶಕ್ತಿ ತುಂಬಲು ಈ ಕ್ರಮ ಹಾದಿ ಮಾಡಿಕೊಡಲಿದೆ ಎಂದು ಗಡ್ಕರಿ ಹೇಳಿದರು.

ಮಧ್ಯಮ ಉದ್ಯಮಗಳ ವಹಿವಾಟು ಮಿತಿಯನ್ನು 250 ಕೋಟಿ ರೂ.ಗೆ ತಿದ್ದುಪಡಿ ಮಾಡಲಾಗಿದ್ದು, ಹೂಡಿಕೆ ಮಿತಿಯನ್ನು 50 ಕೋಟಿ ರೂ.ಗೆ ಏರಿಸಲಾಗಿದೆ ಎಂದು ಜಾವಡೇಕರ್ ಹೇಳಿದ್ದಾರೆ.

ಕೃಷಿಕ ಸಮುದಾಯದ ಕಲ್ಯಾಣಕ್ಕಾಗಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರೈತರಿಗೆ ಪರಿಹಾರ ಒದಗಿಸಲು 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳು (ಎಂಎಸ್‌ಪಿ) ಶೇ. 50 ರಿಂದ ಶೇ.83ರಷ್ಟು ಹೆಚ್ಚಳ ಮಾಡಲಾಗಿದೆ. ರೈತರು ತಾವು ತೆಗೆದುಕೊಂಡಿರುವ ಸಾಲ ಮರುಪಾವತಿಸಲು ಆಗಸ್ಟ್ ವರೆಗೂ ಗಡುವು ನೀಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.

ಯುದ್ಧಕ್ಕೆ ಸಿದ್ಧವಾಗಿರುವಂತೆ ಸೂಚಿಸಿದ ರಕ್ಷಣಾ ಸಚಿವ!

ನವದೆಹಲಿ: ಲಡಾಖ್ ನಲ್ಲಿ ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ…

ಗೋಧ್ರಾ ಹತ್ಯಾಕಾಂಡ: 19 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಗೋಧ್ರಾ ರೈಲು ಹತ್ಯಾಕಾಂಡದ ಪ್ರಮುಖ ಆರೋಪಿಯನ್ನು 19 ವರ್ಷಗಳ ಬಳಿಕ ಬಂಧಿಸಲಾಗಿದೆ. ಗೋಧ್ರಾ ನಗರದ ರಫೀಕ್ ಹುಸೇನ್ ಭಾತುಕ್ ಬಂಧಿತ ಆರೋಪಿ. ಈತನೇ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ಪರೀಕ್ಷೆ ನಡೆಸಿದ್ದು ಎಷ್ಟು ಜನರಿಗೆ ಗೊತ್ತೆ?

ಕೊರೋನಾ ಸೋಂಕು ಪತ್ತೆ ಕಾರ್ಯ ಕೂಡ ರಾಜ್ಯದಲ್ಲಿ ತೀವ್ರಗತಿಯಲ್ಲಿ ನಡೆದಿದ್ದು, ಈಗಾಗಲೇ 1 ಲಕ್ಷ ಜನರನ್ನು ಸೋಕು ಪರೀಕ್ಷೆಗೆ ಒಳಪಡಿಸಲಾಗಿದೆ.