ತುಮಕೂರು: ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಮೂರು ತಿಂಗಳು ತುಮಕೂರು ಪೊಲೀಸರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸೋಕೆ ಇಲ್ಲಿಗೆ ಬಂದಿದ್ದೇನೆ. ರೆಡ್ ಝೋನ್ ಜಿಲ್ಲೆ, ಗ್ರೀನ್ ಜಿಲ್ಲೆ, ಎಂಬುವುದು ಈಗಿಲ್ಲ. ಮಹಾರಾಷ್ಟ್ರ, ತಮಿಳುನಾಡಿನಿಂದ ಎಲ್ಲಾ ಜಿಲ್ಲೆಗೂ ಕೊರೊನಾ ಸೋಂಕಿತರು ಬಂದಿದ್ದಾರೆ. ನನ್ನ ಪ್ರಕಾರ ಯಾವ ಜಿಲ್ಲೆಯ ಪೋಲಿಸರಿಗೆ ಸೋಂಕು ಬರುವುದಿಲ್ಲವೋ ಅದು ಗ್ರೀನ್ ಜೋನ್ ಜಿಲ್ಲೆ. ಈ ಜಿಲ್ಲೆಯ ಪೊಲೀಸರಿಗೆ ಯಾವುದೇ ಸೋಂಕು ಬಂದಿಲ್ಲ. ಚೆನ್ನಾಗಿ ಕಂಟ್ರೋಲ್ ಮಾಡಿದ್ದಾರೆ. ಜನರು ಹಾಗೂ ಪೊಲೀಸರ ಮಧ್ಯೆಯೂ ಇನ್ಫೆಕ್ಷನ್ ಕಡಿಮೆ ಮಾಡಬೇಕು ಎಂದು ಹೇಳಿದ್ದಾರೆ.

ಶಿವಮೊಗ್ಗ ಪೊಲೀಸರಿಗೆ ಸೋಂಕು ವಿಚಾರವಾಗಿ ಮಾತನಾಡಿದ ಪ್ರವೀಣ್ ಸೂದ್, ಯುವತಿಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಈ ವೇಳೆ ಮಾನವೀಯ ದೃಷ್ಟಿಯಿಂದ ಇನ್ಸ್‌ಪೆಕ್ಟರ್ ತಮ್ಮ ಜೀಪಿನಲ್ಲಿ ಕೂರಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರೋಟೋಕಾಲ್ ಪ್ರಕಾರ ಅದು ತಪ್ಪು. ಆದರೆ, ಮಾನವೀಯ ದೃಷ್ಟಿಯಿಂದ ಏನು ಮಾಡ್ಬೇಕಿತ್ತು? ಕೆಲವು ಸರಿ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ ಎಂದರು.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರಿಂದಲೇ ಶೆಟ್ಟರ್ ಗೆ ಸಿಎಂ ಮಾಡಲು ಯತ್ನ

ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋದವರು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಮಾಡಲು ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 116…

ಜಾರ್ಖಂಡ್ ನಲ್ಲಿ ಜುಲೈ ಅಂತ್ಯದವರೆಗೆ ಲಾಕ್ ಡೌನ್ ಘೋಷಣೆ!

ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ…

ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳಿಗೆ ಕೆಟಿಟಿಎಫ್ ನೋಂದಣಿ ಕಡ್ಡಾಯ

ಉತ್ತರಪ್ರಭ ಗದಗ: ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಕಾಯ್ದೆ-2015 ಜಾರಿಯಲ್ಲಿದ್ದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ…