ತುಮಕೂರು: ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಮೂರು ತಿಂಗಳು ತುಮಕೂರು ಪೊಲೀಸರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸೋಕೆ ಇಲ್ಲಿಗೆ ಬಂದಿದ್ದೇನೆ. ರೆಡ್ ಝೋನ್ ಜಿಲ್ಲೆ, ಗ್ರೀನ್ ಜಿಲ್ಲೆ, ಎಂಬುವುದು ಈಗಿಲ್ಲ. ಮಹಾರಾಷ್ಟ್ರ, ತಮಿಳುನಾಡಿನಿಂದ ಎಲ್ಲಾ ಜಿಲ್ಲೆಗೂ ಕೊರೊನಾ ಸೋಂಕಿತರು ಬಂದಿದ್ದಾರೆ. ನನ್ನ ಪ್ರಕಾರ ಯಾವ ಜಿಲ್ಲೆಯ ಪೋಲಿಸರಿಗೆ ಸೋಂಕು ಬರುವುದಿಲ್ಲವೋ ಅದು ಗ್ರೀನ್ ಜೋನ್ ಜಿಲ್ಲೆ. ಈ ಜಿಲ್ಲೆಯ ಪೊಲೀಸರಿಗೆ ಯಾವುದೇ ಸೋಂಕು ಬಂದಿಲ್ಲ. ಚೆನ್ನಾಗಿ ಕಂಟ್ರೋಲ್ ಮಾಡಿದ್ದಾರೆ. ಜನರು ಹಾಗೂ ಪೊಲೀಸರ ಮಧ್ಯೆಯೂ ಇನ್ಫೆಕ್ಷನ್ ಕಡಿಮೆ ಮಾಡಬೇಕು ಎಂದು ಹೇಳಿದ್ದಾರೆ.

ಶಿವಮೊಗ್ಗ ಪೊಲೀಸರಿಗೆ ಸೋಂಕು ವಿಚಾರವಾಗಿ ಮಾತನಾಡಿದ ಪ್ರವೀಣ್ ಸೂದ್, ಯುವತಿಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಈ ವೇಳೆ ಮಾನವೀಯ ದೃಷ್ಟಿಯಿಂದ ಇನ್ಸ್‌ಪೆಕ್ಟರ್ ತಮ್ಮ ಜೀಪಿನಲ್ಲಿ ಕೂರಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರೋಟೋಕಾಲ್ ಪ್ರಕಾರ ಅದು ತಪ್ಪು. ಆದರೆ, ಮಾನವೀಯ ದೃಷ್ಟಿಯಿಂದ ಏನು ಮಾಡ್ಬೇಕಿತ್ತು? ಕೆಲವು ಸರಿ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ ಎಂದರು.

Leave a Reply

Your email address will not be published. Required fields are marked *

You May Also Like

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…

ಕೊರೋನಾ : ನಗರ ಪ್ರದೇಶಗಳ ಆತಂಕ

ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ. ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ…

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಆಧಾರಿತ ಪಾಡ್ ಗೆ ಸುಧಾಕರ್ ಚಾಲನೆ

ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದರು.

ನಾಳೆ ಗಾಂಧಿ ಸ್ಮರಣೆ

ವಿಶ್ವವಿದ್ಯಾಲಯದಗಾಂಧಿ ಸಬರಮತಿ ಆಶ್ರಮದಲ್ಲಿ ಜ.30 ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಗಾಂಧಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.